www.bantwalnews.com Editor: Harish Mambady
ಸಾರಿಗೆ ಇಲಾಖೆಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಆಶ್ರಯದಲ್ಲಿ ಮೇಲ್ಕಾರ್ ನ ಬಿರ್ವ ಸೆಂಟರ್ ನಲ್ಲಿ ಶುಕ್ರವಾರ ಆರಂಭಗೊಂಡ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ.ಚಿನ್ನಪ್ಪ ಗೌಡ ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಉಪಸ್ಥಿತರಿದ್ದರು. ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಚರಣ್ ಕೆ. ಅಧ್ಯಕ್ಷತೆ ವಹಿಸಿದ್ದರು. ಕಚೇರಿ ಅಧೀಕ್ಷಕ ಬಿ.ಕೆ.ಸತೀಶ್ ಸ್ವಾಗತಿಸಿದರು. ಸಿಬ್ಬಂದಿ ನೀಲಪ್ಪ ವಂದಿಸಿದರು. ಸ್ಮಿತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಪಂ ಸದಸ್ಯ ಸಂಜೀವ ಪೂಜಾರಿ ಸಹಿತ ಸಾರ್ವಜನಿಕರು ಹಾಜರಿದ್ದರು. ಈ ಸಂದರ್ಭ ಮಾತನಾಡಿದ ಅತಿಥಿಗಳು ಹೇಳಿದ್ದು ಹೀಗೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…