ಕಲ್ಲಡ್ಕ

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ವಾರ್ಷಿಕೋತ್ಸವ

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠ ಮತ್ತು ಮಂಗಳೂರು ಹೋಬಳಿ ಮತ್ತು ಶ್ರೀರಾಮ ಸಂಸ್ಕೃತ ವೇದಪಾಠಶಾಲೆ ವಾರ್ಷಿಕೋತ್ಸವ, ಸೂತ್ರಸಂಗಮ ಕಾರ್ಯಕ್ರಮ ಭಾನುವಾರ ಪೆರಾಜೆ ಮಠದಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ, ಭಾರತೀಯ ಸಂಸ್ಕೃತಿಯಲ್ಲಿ ಪೂರ್ಣ ಮಂಡಲಕ್ಕೆ ವಿಶೇಷ ಸ್ಥಾನವಿದ್ದು, ಮಾಣಿ ಮಠ ಆ ಸಂಭ್ರಮದಲ್ಲಿದೆ. ಪೂರ್ಣ ಮಂಡಲದ ವರ್ಷ ನಿರಂತರ ಕಾರ್ಯಕ್ರಮಗಳು, ಉತ್ಸವಗಳು ನಡೆಯಬೇಕು ಎಂದು ಹಾರೈಸಿದರು.

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಸೇವಾ ಸಮಿತಿ ವತಿಯಿಂದ ಶ್ರೀಗಳವರ ಮುಂದಿನ ಚಾತುರ್ಮಾಸ್ಯವನ್ನು ಮಾಣಿಯಲ್ಲಿ ನಡೆಸುವಂತೆ ಬೇಡಿಕೆ ಸಲ್ಲಿಸಲಾಯಿತು. ವೇದಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ  ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಹಾರಕರೆ ನಾರಾಯಣ ಭಟ್ ಪ್ರಾಸ್ತಾವನೆಗೈದರು. ಬಂಗಾರಡ್ಕ ಜನಾರ್ಧನ ಭಟ್ ಲೆಕ್ಕಪತ್ರ ಮಂಡಿಸಿದರು. ಸಿಗಂದೂರು ಸತ್ಯ ಪ್ರತಿಭಾಪುರಸ್ಕಾರ ನಿರ್ವಹಣೆ ಮಾಡಿದರು. ಸೇರಾಜೆ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿದರು. ಪ್ರಮುಖರಾದ ಶೈಲಜಾ ಕೆ.ಟಿ.ಭಟ್, ಹರಿಪ್ರಸಾದ ಪೆರಿಯಪ್ಪು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ