ಬಂಟ್ವಾಳ

ಹಿರಿಯ ಛಾಯಾಗ್ರಾಹಕ ಪದ್ಮನಾಭ ರಾವ್ ಅವರಿಗೆ ನುಡಿನಮನ

ಬಂಟ್ವಾಳ ವಲಯದ ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಮತ್ತು ಸಾರ್ವಜನಿಕರ ವತಿಯಿಂದ ಹಿರಿಯ ಛಾಯಾಗ್ರಾಹಕ ಪದ್ಮನಾಭ ರಾವ್ ಅವರಿಗೆ ನುಡಿನಮನವನ್ನು ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಮಂಗಳವಾರ ಸಂಜೆ ಸಲ್ಲಿಸಲಾಯಿತು.

ಜಾಹೀರಾತು

ಮಿತಭಾಷಿಯಾಗಿ, ಸ್ನೇಹಜೀವಿಯಾಗಿದ್ದ ಪದ್ಮನಾಭ ರಾವ್ ಅವರ ಗುಣಸ್ವಭಾವ ಅನುಕರಣೀಯ, ಮಾತು, ನಡವಳಿಕೆ, ಸಂಸ್ಕಾರದ ಮೂಲಕ ಮಾದರಿಯಾಗಿದ್ದವರು ಪದ್ದಣ್ಣ ಎಂದೇ ಕರೆಯಲ್ಪಡುವ ಪದ್ಮನಾಭ ರಾವ್ ಎಂದು ಸಂತಾಪ ಸೂಚಕ ಮಾತುಗಳನ್ನಾಡಿದವರು ತಿಳಿಸಿದರು. ಇದೇ ವೇಳೆ ಪದ್ಮಾ ಕಾಂಪ್ಲೆಕ್ಸ್ ಮಾಲೀಕ ಹಾಗೂ ಕಲಾಪೋಷಕ ಬಿ.ಸತೀಶ್ ರಾವ್ ಅವರಿಗೂ ನುಡಿನಮನ ಸಲ್ಲಿಸಲಾಯಿತು.

ನಿವೃತ್ತ ಮುಖ್ಯೋಪಾಧ್ಯಾಯ, ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ, ಹಿರಿಯ ಕಲಾವಿದ ಮಂಜು ವಿಟ್ಲ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ, ರಾವ್ ಅವರ ಸಹೋದರ ಬಿ.ರಾಮಚಂದ್ರ ರಾವ್, ಫೊಟೋಗ್ರಾಫರ್ಸ್ ಸಂಘದ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ, ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ನಿವೃತ್ತ ಪ್ರೊಫೆಸರ್ ಅನಂತ ಪದ್ಮನಾಭ ರಾವ್, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹರೀಶ ಮಾಂಬಾಡಿ, ಛಾಯಾಗ್ರಾಹಕರ ಸಂಘದ ಪ್ರಮುಖರಾದ ದಯಾನಂದ್, ಪತ್ರಕರ್ತರಾದ ರಾಜಾ ಬಂಟ್ವಾಳ, ರತ್ನದೇವ ಪುಂಜಾಲಕಟ್ಟೆ, ಪದ್ಮನಾಭ ರಾವ್ ಅವರ ಪುತ್ರಿ ಪಲ್ಲವಿ ರಾವ್  ನುಡಿನಮನ ಸಲ್ಲಿಸಿದರು. ಕಲಾವಿದ, ರಂಗಕರ್ಮಿ ಎಚ್. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು. ಪ್ರಮುಖರಾದ ವಿಶ್ವನಾಥ ಬಂಟ್ವಾಳ್, ಸುಂದರ ರಾವ್, ಫೊಟೋಗ್ರಾಫರ್ಸ್ ಸಂಘದ ಸದಸ್ಯರು, ನಾನಾ ಸಂಘಟನೆಗಳ ಪ್ರಮುಖರು ಈ ಸಂದರ್ಭ ಹಾಜರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts