ಪುಂಜಾಲಕಟ್ಟೆ

ವಗ್ಗದಲ್ಲಿ ಕಾಂಗ್ರೆಸ್ ನಿಂದ ಪಂಚಾಯತ್ ಸದಸ್ಯರ ಸಮ್ಮೇಳನ

ವಗ್ಗದಲ್ಲಿ ಪಂಚಾಯತ್ ಸದಸ್ಯರ ಸಮ್ಮೇಳನ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ವಗ್ಗದಲ್ಲಿ ಸರಪಾಡಿ ಜಿಪಂ ಕ್ಷೇತ್ರಕ್ಕೊಳಪಟ್ಟ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಸದಸ್ಯರು ಮತ್ತು ಪರಾಜಿತ ಅಭ್ಯರ್ಥಿಗಳ ಸಮ್ಮೇಳನ ನಡೆಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ರೈ, ಪಂಚಾಯತ್ ಚುನಾವಣೆಗೆ ಪೂರ್ವತಯಾರಿಯನ್ನು ಮಾಡಿಕೊಂಡು ಎಲ್ಲರು ಓಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಬಿಜೆಪಿ ಸರಕಾರದ ವೈಫಲ್ಯತೆಗಳನ್ನು ಜನರಿಗೆ ತಿಳಿಸುವ ಮುಖಾಂತರ ಪಂಚಾಯತ್ ಮಟ್ಟದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸೋಣ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಎಲ್ಲಾ ಪಂಚಾಯತ್ ಗಳನ್ನು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತರುವಲ್ಲಿ ಒಗ್ಗಟಾಗಿ ದುಡಿಯೋಣ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸದ್ಯಸರಾದ ಪದ್ಮಶೇಖರ್ ಜೈನ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ತಾಲೂಕು ಪಂಚಾಯತ್ ಸದ್ಯಸರಾದ ಧನಲಕ್ಷ್ಮಿ ಬಂಗೇರ, ಬೇಬಿ ಕೃಷ್ಣಪ್ಪ, ನಾವೂರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ಚಂದಪ್ಪ ನಾಯ್ಕ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಶ್ರೀಧರ ಪೂಜಾರಿ, ಕಾವಳಮೂಡುರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಪೂಂಜ, ಮುಖಂಡರಾದ ಜಿನರಾಜ ಅರಿಗ, ಮಾಯಿಲಪ್ಪ ಸಾಲಿಯಾನ್, ಸಂಪತ್ ಕುಮಾರ್ ಶೆಟ್ಟಿ, ಡೀಕಯ ಬಂಗೇರ, ಡಾ ಶೇರಾ, ಮಾಣಿಕ್ಯರಾಜ್ ಜೈನ್, ಅಬ್ದುಲ್ ಲತೀಪ್, ಬೆನಡಿಕ್ಟ್ ಡಿಸೋಜ, ಬಿ ಆರ್ ಅಂಚನ್, ವಿಶ್ವನಾಥ್ ಬಿತ್ತ ಹಾಗೂ ಪಂಚಾಯತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಕರ್ಣ ವಂದಿಸಿದರು.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ