ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಸಿ. ಭಂಡಾರಿ ನೇತೃತ್ವದ ತಂಡದ ಮುಂದಾಳತ್ವದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಈ ದೇವಸ್ಥಾನವೀಗ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, ನದಿ ತೀರದಲ್ಲಿ ಸುಮಾರು 1 ಕೋಟಿ ರುಪಾಯಿ ಅಂದಾಜು ವೆಚ್ಚದಲ್ಲಿ ನೂತನ ಜ್ಞಾನ ಮಂದಿರ ಸಮುದಾಯ ಭವನ ಫೆ. 9ರಂದು ಲೋಕಾರ್ಪಣೆಗೆ ಸಜ್ಜಾಗುತ್ತಿದೆ. ಇದರ ಜೊತೆಗೆ ಈಗಾಗಲೇ ಪ್ರಸ್ತಾಪಗೊಂಡಿರುವ ನದೀ ತೀರದ ರಸ್ತೆ ನಿರ್ಮಾಣಕ್ಕೆ ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಸುಮಾರು 7 ಕೋಟಿ ರೂ ವೆಚ್ಚಕ್ಕೆ ಪ್ರಸ್ತಾವನೆಗೊಂಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ನಂದಾವರ ಕ್ಷೇತ್ರ ಸ್ಪಿರಿಚುವಲ್ ಟೂರಿಸಂ (ಧಾರ್ಮಿಕ ಪ್ರವಾಸೋದ್ಯಮ)ದ ಪ್ರಮುಖ ಆಕರ್ಷಣೆಯಾಗಿ ಮೂಡಿಬರಲಿದೆ.
ವಿಜಯಲಕ್ಷ್ಮೀ ಸುಜೀರ್ಗುತ್ತು ಸಂಜೀವ ಚೌಟ ಸಭಾಂಗಣ ನಿರ್ಮಾಣಕ್ಕೆ ಸುಜೀರ್ಗುತ್ತು ಸಂಜೀವ ಚೌಟ ನೆನಪಿಗೋಸ್ಕರ ಮೈಟ್ ಅಧ್ಯಕ್ಷ ರಾಜೇಶ್ ಚೌಟ ನೆರವು ಒದಗಿಸುತ್ತಿದ್ದು, ಈ ಜ್ಞಾನಮಂದಿರ ಸಮುದಾಯ ಭವನ ಸುಮಾರು 1 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸಜೀಪಮಾಗಣೆಯ ಸುತ್ತಮುತ್ತಲಿನ ಮಕ್ಕಳಿಗೆ ಸಂಸ್ಕಾರವನ್ನು ಉದ್ದೀಪಗೊಳಿಸುವ ನಿಟ್ಟಿನಲ್ಲಿ ಯಕ್ಷಗಾನ, ತಾಳಮದ್ದಳೆ, ಹರಿಕಥೆ, ಭರತನಾಟ್ಯ, ಭಜನೆ ಮೊದಲಾದ ತರಬೇತಿಗಳನ್ನು ಆಯೋಜಿಸಲು ಜ್ಞಾನಮಂದಿರ ಸಹಕಾರಿಯಾಗುತ್ತದೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ 50 ಲಕ್ಷ ರುಪಾಯಿ ಅನುದಾನದಲ್ಲಿ ನದಿ ತೀರದ ತಡೆಗೋಡೆ ಕಾಮಗಾರಿಯೂ ಪ್ರಗತಿಯಲ್ಲಿದೆ ಎನ್ನುತ್ತಾರೆ ಎ.ಸಿ.ಭಂಡಾರಿ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಧಾರ್ಮಿಕ ಪ್ರವಾಸಿ ತಾಣವಾಗಿ ಸೊಬಗಿನ ನಂದಾವರ"