ಬಂಟ್ವಾಳ

ಕಡೇಶಿವಾಲಯದಲ್ಲಿ ರಾಮೋತ್ಸವ

ಕಡೇಶಿವಾಲಯದ ಪ್ರತಾಪನಗರ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ರಾಮೋತ್ಸವ ನಡೆಯಿತು. ನಾಲ್ಕು ದಿನಗಳ ಕಾಲ ಗ್ರಾಮ ಸಂಕೀರ್ತನೆ ಈ ಸಂದರ್ಭ ಗಮನ ಸೆಳೆಯಿತು. ಸೂರ್ಯೋದಯ ಸಮಯ ಗಣಹೋಮ ನಡೆದು ನಂತರ ದೀಪೋಜ್ವಲನೆಯ ಮೂಲಕ ಭಜನೆ ಆರಂಭವಾಯಿತು. 14 ಭಜನಾ ಮಂಡಳಿಗಳ ಸಹಕಾರದೊಂದಿಗೆ ಅರ್ಧ ಏಕಾಹ ಭಜನೆ ಸೂರ್ಯಸ್ತ ಸಮಯದಲ್ಲಿ ಶ್ರೀ ರಾಮಚಂದ್ರನಿಗೆ ಮಹಾ ಮಂಗಳಾರತಿಯ ಮೂಲಕ ಸಮಾಪ್ತಿಗೊಂಡಿತು.

ಜಾಹೀರಾತು

ನಂತರ  ಉಯ್ಯಾಲೆಯಲ್ಲಿ ವಿರಾಜಮಾನಳಾಗಿದ್ದ ತಾಯಿ ಭಾರತಿಗೆ ದೀಪ ಬೆಳಗಿ ಪುಷ್ಪಾರ್ಚನೆಯ ಮಾಡುವುದರ ಮೂಲಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ವಹಿಸಿದ್ದರು. ಕಹಳೆ ನ್ಯೂಸ್ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ದಿಕ್ಸೂಚಿ ಭಾಷಣಗೈದರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಪ್ರಮುಖರಾದ ತಿರುಮಲೇಶ್ವರ ಭಟ್ ಕೈಂತಜೆ ಭಜನಾ ಮಂದಿರದ ಪದಾಧಿಕಾರಿಗಳಾದ ಭಾಸ್ಕರ ಮುಂಡಾಲ ಹಾಗೂ ಗಿರೀಶ್ ಕೊರತಿಗುರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಊರಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.ಹಿಂದೂ ಜಾಗರಣ ವೇದಿಕೆ ಕಡೇಶಿವಾಲಯ ದೀಪಾವಳಿ ಕ್ರೀಡೋತ್ಸವ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಸೆಲ್ಫೀ ವಿಥ್ ಗುರುಸ್ವರೂಪಿ ಸ್ಪರ್ಧೆಯ ವಿಜೇತರಿಗೆ ಅಭಿನಂದನೆ ಹಾಗೂ ಬಹುಮಾನ ವಿತರಣೆ ನಡೆಯಿತು. ಗಿರೀಶ್ ಸ್ವಾಗತಿಸಿದರು ದುರ್ಗಾಪ್ರಸಾದ್ ಧನ್ಯವಾದ ಸಮರ್ಪಿಸಿದರು. ಶೃತಿನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.. ಅನ್ನ ಸಂತರ್ಪಣೆಯ ಬಳಿಕ ದೇಂತಡ್ಕ ಮೇಳದವರಿಂದ ಮೈಮೆದ ಮಹಮ್ಮಾಯಿ ತುಳು ಯಕ್ಷಗಾನ ನಡೆಯಿತು.

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ