ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ 8 ಗ್ರಾಮಗಳ ಮತದಾರರಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸದಸ್ಯರು ಒಟ್ಟು10 ಸ್ಥಾನಗಳನ್ನು ಗಳಿಸುವ ಮೂಲಕ ಜಯಭೇರಿ ಬಾರಿಸಿದ್ದಾರೆ.
ಚುನಾವಣೆಯಲ್ಲಿ ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 10 ಕಡೆ ಗೆದಿದ್ದಾರೆ. ಪ್ರಭಾಕರ ಪ್ರಭು ಕರ್ಪೆ, ಸಂದೇಶ್ ಶೆಟ್ಟಿ,ಸಂಗಬೆಟ್ಟು, ರಾಜೇಶ್ ಶೆಟ್ಟಿ, ಎಳಿಯನಡುಗೋಡು, ದಿನೇಶ್ ಪೂಜಾರಿ,ಆರಂಬೋಡಿ,ಮಂದಾರತಿ ಶೆಟ್ಟಿ ಸಂಗಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ ಸಂಗಬೆಟ್ಟು, ಸತೀಶ್ ಪೂಜಾರಿ ಸಂಗಬೆಟ್ಟು, ಜಾರಪ್ಪ ನಾಯ್ಕ ಕರ್ಪೆ, -ವೀರಪ್ಪ ಪರವ ಆರಂಬೋಡಿ ಗೆಲುವು ಸಾಧಿಸಿದ ಸಹಕಾರ ಭಾರತಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪದ್ಮರಾಜ್ ಬಲ್ಲಾಳ್, ಅರುಣಾ ಸುರೇಶ್ ಶೆಟ್ಟಿ, -ದೇವರಾಜ್ ಸಾಲಿಯಾನ್ ಗೆಲುವು ಸಾಧಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…