ಬಂಟ್ವಾಳ

ಸಿದ್ಧರಾಮಯ್ಯ ಸರಕಾರದ ಕ್ರಾಂತಿಕಾರಕ ನಿರ್ಧಾರದಿಂದ 94ಸಿ ಹಕ್ಕುಪತ್ರ : ಯು.ಟಿ.ಖಾದರ್

ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಗ್ರಾಮಾಂತರ ಪ್ರದೇಶದ ಬಡವರಿಗಾಗಿ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಂದ ಕ್ರಾಂತಿಕಾರಿ ಕಾನೂನಿನಿಂದಾಗಿ ಇಂದು ಬಡವರ‌ ಬಾಳಿಗೆ ಹೊಸ ಬೆಳಕಾಗಿ ಸ್ವಾಭಿಮಾನದ ಸಂಕೇತವಾಗಿ ಮಾರ್ಪಟ್ಟಿದೆ ಎಂದು ಮಂಗಳೂರು ಶಾಸಕ ಯು.ಟಿ‌. ಖಾದರ್ ತಿಳಿಸಿದರು.

ಜಾಹೀರಾತು

ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಇರಾ ಗ್ರಾಮದ 3ನೇ ಹಂತದ 94ಸಿ ಹಕ್ಕುಪತ್ರ ವಿತರಣೆ ನೆರವೇರಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕುರ್ನಾಡು ಜಿ.ಪಂ. ಸದಸ್ಯರಾದ ಮಮತಾ ಗಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ. ಉಮ್ಮರ್, ಮೊಯಿದಿ ಕುಂಞಿ,  ತುಳಸಿ ಪಿ.ಪೂಜಾರಿ, ಲೆನ್ನಿ ಡಿಸೋಜ, ಪಾರ್ವತಿ, ಸಿಸಿಲಿಯಾ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಎಸ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಗೆ, ಮಾದುಪಳ್ಳ, ಸಂಪಿಲ, ಮೊಂತಿಮಾರುಪಡ್ಪು, ಕುರಿಯಾಡಿ, ಪಂಜಾಜೆ, ರಸ್ತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಾಸಕರು ಶಿಲಾನ್ಯಾಸ ನೆವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಸ್ವಾಗತಿಸಿ, ಗ್ರಾಮಕರಣಿಕ ತೌಫಿಕ್ ವಂದಿಸಿದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ