ಬಂಟ್ವಾಳ

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ಯು.ಟಿ.ಖಾದರ್

ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರ ಬಹಳಷ್ಟು ವೆಚ್ಚಗಳನ್ನು ಮಾಡುತ್ತಿದ್ದು, ಪೋಷಕರು ಪ್ರತಿಷ್ಠೆ ಬಿಟ್ಟು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವಂತಾಗಲಿ ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ಇರಾ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ಬಾಳೆಪುಣಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ  ಎಂ.ಆರ್.ಪಿ.ಎಲ್  ಸಹಕಾರದಿಂದ ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷ ತೆಯನ್ನು ಇರಾ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ  ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಪಂ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಬಿಇಒ ಜ್ಞಾನೇಶ್, ಇಸಿಒ ಸುಶೀಲಾ, ಬಾಳೆಪುಣಿ ಮುದರ್ರಿಸ್ ಆಲ್ ಹಾಜಿ ಮಹಮ್ಮದಲಿ ಫೈಝಿ, ನ್ಯಾಯವಾದಿ ಯಶವಂತ ಮರೋಳಿ, ಗ್ರಾಪಂ ಸದಸ್ಯರಾದ ಎಂ.ಬಿ.ಉಮ್ಮರ್, ಮೊಯ್ದೀನ್ ಮೂಲೆ, ತಿಬಿಯಾನ್ ಸ್ಕೂಲ್ ಅಧ್ಯಕ್ಷ ಮೊಯ್ದೀನ್ ಹಾಜಿ ಬದಿಮಾಲೆ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಅಝೀಝ್ ಬಡದಲ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹಸೈನಾರ್ ಭಾಗವಹಿಸಿದ್ದರು. ಶಾಲಾ ಪೋಷಕ ಕುಂಞಹಾಜಿ ಬಾಳೆಪುಣಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸವಿತಾ ಸ್ವಾಗತಿಸಿದರು. ಸಹಶಿಕ್ಷಕಿ ಅನುಸೂಯ ವಂದಿಸಿದರು. ಶೋಭಿತಾ ಹಾಗೂ ವಿಜಯಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

1 day ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 days ago