ಬಂಟ್ವಾಳ

ಹಾಡಹಗಲೇ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕಳವು

ಹಾಡಹಗಲೇ ಬಿ.ಸಿ.ರೋಡಿನ ಕೈಕುಂಜೆ ಎಂಬಲ್ಲಿ ಕಳವು ಪ್ರಕರಣ ನಡೆದಿದೆ. ಬಿ.ಸಿ.ರೋಡ್ ಕೈಕುಂಜ ಪಶ್ಚಿಮ ಬಡಾವಣೆಯಲ್ಲಿ ಶ್ರೀಹರಿ ಯಳಚಿತ್ತಾಯ ಅವರ ಪತ್ನಿ ನಿವೃತ್ತ ಶಿಕ್ಷಕಿ ಶಾರದಾ ಅವರು ಈ ಕುರಿತು ಬಂಟ್ವಾಳ ನಗರ ಠಾಣೆಗೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಜನವರಿ 30ರಂದು ಬೆಳಗ್ಗೆ ಸುಮಾರು 11.20ಕ್ಕೆ ಮನೆಗೆ ಬೀಗ ಹಾಕಿ ಸಮೀಪದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಅವರು ತೆರಳಿದ್ದ ವೇಳೆ ಘಟನೆ ನಡೆದಿದೆ. ಮಧ್ಯಾಹ್ನ 2.45ರ ವೇಳೆ ಮನೆಗೆ ಮರಳಿದಾಗ ಬಾಗಿಲು ಮುರಿದ ಸ್ಥಿತಿಯಲಿದ್ದು, ಕಳವು ಪ್ರಕರಣ ಗೊತ್ತಾಗಿದೆ.

ಸಾಂದರ್ಭಿಕ ಚಿತ್ರ – ಕೃಪೆ: ಅಂತರ್ಜಾಲ

ಕೋಣೆಯಲ್ಲಿದ್ದ ಕಪಾಟಿನ ಒಳಗೆ ಪ್ಲಾಸ್ಟಿಕ್ ಕವರಿನಲ್ಲಿದ್ದ ಬೆಳ್ಳಿಯ ಸಾಮಾಗ್ರಿಗಳಾದ ತಂಬಿಗೆ, ದೀಪಗಳು, ಬಟ್ಟಲುಗಳು, ಜಪ ಮಾಡುವ ಸಾಮಾಗ್ರಿಗಳು, ಆರತಿ ತಟ್ಟೆಗಳು ಹಾಗೂ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನಲ್ಲಿಟ್ಟಿದ್ದ ನಗದನ್ನು ಕಳ್ಳರು ದೋಚಿದ್ದಾರೆ ಎಂದು ದೂರಲಾಗಿದ್ದು, ಬೆಳ್ಳಿಯ ಸಾಮಗ್ರಿಗಳು ಮತ್ತು ನಗದಿನ ಒಟ್ಟು ಮೌಲ್ಯ ಸುಮಾರು ೨೪,೫೦೦ ರೂ.ಗಳೆಂದು ಅಂದಾಜಿಸಲಾಗಿದ್ದು, ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

4 hours ago