ಬಂಟ್ವಾಳ

ಹಾಡಹಗಲೇ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕಳವು

ಹಾಡಹಗಲೇ ಬಿ.ಸಿ.ರೋಡಿನ ಕೈಕುಂಜೆ ಎಂಬಲ್ಲಿ ಕಳವು ಪ್ರಕರಣ ನಡೆದಿದೆ. ಬಿ.ಸಿ.ರೋಡ್ ಕೈಕುಂಜ ಪಶ್ಚಿಮ ಬಡಾವಣೆಯಲ್ಲಿ ಶ್ರೀಹರಿ ಯಳಚಿತ್ತಾಯ ಅವರ ಪತ್ನಿ ನಿವೃತ್ತ ಶಿಕ್ಷಕಿ ಶಾರದಾ ಅವರು ಈ ಕುರಿತು ಬಂಟ್ವಾಳ ನಗರ ಠಾಣೆಗೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಜನವರಿ 30ರಂದು ಬೆಳಗ್ಗೆ ಸುಮಾರು 11.20ಕ್ಕೆ ಮನೆಗೆ ಬೀಗ ಹಾಕಿ ಸಮೀಪದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಅವರು ತೆರಳಿದ್ದ ವೇಳೆ ಘಟನೆ ನಡೆದಿದೆ. ಮಧ್ಯಾಹ್ನ 2.45ರ ವೇಳೆ ಮನೆಗೆ ಮರಳಿದಾಗ ಬಾಗಿಲು ಮುರಿದ ಸ್ಥಿತಿಯಲಿದ್ದು, ಕಳವು ಪ್ರಕರಣ ಗೊತ್ತಾಗಿದೆ.

ಸಾಂದರ್ಭಿಕ ಚಿತ್ರ – ಕೃಪೆ: ಅಂತರ್ಜಾಲ

ಕೋಣೆಯಲ್ಲಿದ್ದ ಕಪಾಟಿನ ಒಳಗೆ ಪ್ಲಾಸ್ಟಿಕ್ ಕವರಿನಲ್ಲಿದ್ದ ಬೆಳ್ಳಿಯ ಸಾಮಾಗ್ರಿಗಳಾದ ತಂಬಿಗೆ, ದೀಪಗಳು, ಬಟ್ಟಲುಗಳು, ಜಪ ಮಾಡುವ ಸಾಮಾಗ್ರಿಗಳು, ಆರತಿ ತಟ್ಟೆಗಳು ಹಾಗೂ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನಲ್ಲಿಟ್ಟಿದ್ದ ನಗದನ್ನು ಕಳ್ಳರು ದೋಚಿದ್ದಾರೆ ಎಂದು ದೂರಲಾಗಿದ್ದು, ಬೆಳ್ಳಿಯ ಸಾಮಗ್ರಿಗಳು ಮತ್ತು ನಗದಿನ ಒಟ್ಟು ಮೌಲ್ಯ ಸುಮಾರು ೨೪,೫೦೦ ರೂ.ಗಳೆಂದು ಅಂದಾಜಿಸಲಾಗಿದ್ದು, ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ