ಕಲ್ಲಡ್ಕ

ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ 6ರಂದು ವರ್ಧಂತ್ಯುತ್ಸವ

ಕಲ್ಲಡ್ಕ ಸಮೀಪ ಗೇರುಕಟ್ಟೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ ಆಡಳಿತಕ್ಕೊಳಪಟ್ಟ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠಾ ಬ್ರಹ್ಮಕಲಶದ ಸಪ್ತಮ ವರ್ಧಂತ್ಯುತ್ಸವ ಫೆಬ್ರವರಿ 6ರಂದು ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ತಿಳಿಸಿದ್ದಾರೆ.

ಶ್ರೀ ಉಮಾಶಿವ ಕ್ಷೇತ್ರ, ಕಲ್ಲಡ್ಕ

ಬೆಳಗ್ಗೆ 7ಕ್ಕೆ ಪುಣ್ಯಾಹವಾಚನ, 7.15ಕ್ಕೆ ಗಣಪತಿ ಹವನ, ನವಕ ಪ್ರತಿಷ್ಠೆ, 8 ಗಂಟೆಗೆ ಶತರುದ್ರ ಜಪ, 9.30ಕ್ಕೆ ನಾಗ, ರಕ್ತೇಶ್ವರಿ ತಂಬಿಲ, 10ಕ್ಕೆ ಸಾಮೂಹಿಕ ಕುಂಕುಮಾರ್ಚನೆ, 10.45ಕ್ಕೆ ನವಕ ಕಲಶಾಭಿಷೇಕ, ಶತರುದ್ರ ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ಇರಲಿದೆ. ಬೆಳಗ್ಗೆ 11 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಗಣೇಶ ಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಧಾರ್ಮಿಕ ಪರಿಷತ್ತು ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ಉದ್ಯಮಿ ರಾಜಾರಾಮ ಭಟ್ ಬಲಿಪಗುಳಿ, ಎಲ್ಲೈಸಿ ನಿವೃತ್ತ ಮುಖ್ಯ ಪ್ರಬಂಧಕ ಪ್ರೇಮನಾಥ ರಾವ್ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.