ಒಡಿಯೂರು ರಥೋತ್ಸವ, ಧಾರ್ಮಿಕ ಸಭೆ

ಸನ್ಮಾನ ಸಮಾರಂಭ

ಒಡಿಯೂರು ಶ್ರೀಗಳು ಮಾತನಾಡುತ್ತಿರುವುದು.

ಆತ್ಮೋನ್ನತಿಯ ಕಡೆಗೆ ನಾವು ನಮ್ಮ ರಥ ವನ್ನು ಎಳೆಯಬೇಕಾಗಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು. ಮಂಗಳವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆಯುತ್ತಿರುವ ಶ್ರೀ ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಒಡಿಯೂರು ರಥೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ, ಅಶೀರ್ವಚನ ನೀಡಿದರು.

ಸಾಧ್ವೀ ಮಾತಾನಂದ ಮಯೀ ಆಶೀರ್ವಚನ ನೀಡಿ ಆತ್ಮ ಶಕ್ತಿ ಉದ್ದೀಪನ ಮಾಡುವ ಉದ್ದೇಶವನ್ನಿಟ್ಟುಕೊಂಡು ಶ್ರೀ ಸಂಸ್ಥಾನದಲ್ಲಿ ಮಾನವೀಯತೆಗೆ ಪೂರಕವಾದ ಕಾರ್ಯಗಳು ನಡೆಯುತ್ತಿದೆ ಎಂದರು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ ನಿಜ ಅರ್ಥದ ಗ್ರಾಮ ವಿಕಾಸ ಒಡಿಯೂರು ಸಂಸ್ಥಾನದ ಮೂಲಕ ನಡೆದಿದೆ ಎಂದರು.

ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ ತುಳುನಾಡಿನ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಒಡಿಯೂರು ಸಂಸ್ಥಾನ ವಿಶೇಷ ಮುತುವರ್ಜಿ ವಹಿಸಿದೆ ಎಂದರು.

ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಮಾತನಾಡಿ ದೇವರು ದೇಶ, ಧರ್ಮ ವನ್ನು ಜೀವನ ಪದ್ಧತಿಯನ್ನಾಗಿ ಸ್ವೀಕರಿಸಿದ ಜಗತ್ತಿನ ಏಕೈಕ ದೇಶ ಭಾರತವಾಗಿದೆ ಎಂದರು.

ಜಾಹೀರಾತು

ಅಂತಾರಾಷ್ಟ್ರೀಯ ಕ್ರೀಡಾಪಟು ಪಟ್ಲಗುತ್ತು ಅನೀಶ್ ಶೆಟ್ಟಿ ಅವರಿಗೆ ಶ್ರೀ ಗುರುದೇವಾನುಗ್ರಹ ಪುರಸ್ಕಾರ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಸಾರ್ವಜನಿಕ ಸತ್ಯ ನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಮಹಾಸಂತರ್ಪಣೆ ನಡೆಯಿತು. ಕುಂಬಳೆ ನಾಟ್ಯ ವಿದ್ಯಾನಿಲಯ ವಿದುಷಿ ವಿದ್ಯಾಲಕ್ಷ್ಮೀ ಅವರ ಶಿಷ್ಯವೃಂದ ದವರಿಂದ ನೃತ್ಯ ಸಂಭ್ರಮ ನಡೆಯಿತು. ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ,  ಹೈಟೆಕ್ ಇಲೆಕ್ಪ್ರಿಫಿಕೇಶನ್ ಎಂಜಿನಿಯರಿಂಗ್ ನ ಆಡಳಿತ ನಿರ್ದೇಶಕ ರವಿನಾಥ್ ವಿ ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಸುರೇಶ್ ರೈ, ಉದ್ಯಮಿ ವಾಮಯ್ಯ ಬಿ ಶೆಟ್ಟಿ ಮುಂಬೈ, ರೇವತಿ ವಾಮಯ್ಯ ಶೆಟ್ಟಿ, ಒಡಿಯೂರು ಗುರುದೇವ ಸೇವಾ  ಬಳಗದ ಅಧ್ಯಕ್ಷ ಎ ಅಶೋಕ್ ಬಿಜೈ, ಉದ್ಯಮಿ ಕೃಷ್ಣ ಎಲ್  ಶೆಟ್ಟಿ, ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಅಂಕ್ಲೇಶ್ವರ ತುಳುಕೂಟದ ಅಧ್ಯಕ್ಷ ಶಂಕರ್ ಶೆಟ್ಟಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ ಶೆಟ್ಟಿ, ಗ್ರಾಮ ವಿಕಾಸ ಯೋಜನೆ ವಿವಿಧ ಘಟಕಗಳ ಅಧ್ಯಕ್ಷರು  ಉಪಸ್ಥಿತರಿದ್ದರು.

ಯಶವಂತ ವಿಟ್ಲ ಸ್ವಾಗತಿಸಿದರು. ಚಂದ್ರಶೇಖರ ಉಪಾಧ್ಯಾಯ ಬಳಗ ಪ್ರಾರ್ಥಿಸಿದರು. ಪ್ರಕಾಶ್ ಶೆಟ್ಟಿ ಪೇಟೆಮನೆ ನಿರೂಪಿಸಿದರು. ಸೇರಾಜೆ ಗಣಪತಿ ಭಟ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಡಿಯೂರು ರಥೋತ್ಸವ, ಧಾರ್ಮಿಕ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*