ಬಂಟ್ವಾಳ

ಕೊರೋನಾ – ಬೇಡ ಆತಂಕ, ರೋಗ ಲಕ್ಷಣ ಅನುಮಾನವೇ, ಆರೋಗ್ಯ ಇಲಾಖೆ ಸಂಪರ್ಕಿಸಿ

ಕೊರೊನೊ ಸೋಂಕಿಗೆ ಸಂಬಂಧಿಸಿದಂತೆ ಯಾರು ಕೂಡ ಆತಂಕಪಡಬೇಕಾಗಿಲ್ಲ ಈಗಾಗಲೇ ಜಿಲ್ಲೆಯಲ್ಲಿ ಈಬಗ್ಗೆ ಎಲ್ಲಾ ರೀತಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೋಗ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆ ಸಂಪರ್ಪಕಿಸುವಂತೆ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ಹೇಳಿದ್ದಾರೆ.


ಬಂಟ್ವಾಳ ತಾಪಂನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಸೋಂಕು ಕುರಿತಾದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಜಾಹೀರಾತು

ಮಾರ್ಚ್ ತಿಂಗಳಿನಿಂದ ಕುಡಿಯುವ ನೀರಿನ ಸ್ಥಾವರ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಮೆಸ್ಕಾಂ ಅಧಿಕಾರಿಗಳಿಗೆ ಇಒ ರಾಜಣ್ಣ ಸೂಚಿಸಿದರು.

ಭಾಗ್ಯ ಜ್ಯೋತಿ, ಕುಟೀರಜ್ಯೋತಿ ಮತ್ತು ಹತ್ತು ಹೆಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್ ಗಳನ್ನು ಹೊಂದಿರುವ ಕೃಷಿಕರ ಅಗತ್ಯ ದಾಖಲೆಗಳನ್ನು ಪಡೆಯುವ ಬಗ್ಗೆ ಗೊಂದಲವುಂಟಾಗಿದ್ದು,ಸಾಕಷ್ಟು ದೂರುಗಳು ಬಂದಿದೆ.ಹಾಗಾಗಿ ಮೆಸ್ಕಾಂ ಸಿಬ್ಬಂದಿಗಳು ರೈತರ ಮನೆಗೆ ಭೇಟಿ ನೀಡುವ ವೇಳೆ ಪೂರ್ವ ಮಾಹಿತಿ ತೆರಳುವಂತೆ ಅಧ್ಯಕ್ಷ ಚಂದ್ರಹಾಸ ಕರ್ಕೇರ ಸೂಚಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ