ಪ.ಜಾತಿ, ಪಂಗಡ ಮುಖಂಡರ ಸಮಾಲೋಚನಾ ಸಭೆಗೆ ಆಹ್ವಾನ

ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಸರಕಾರಿ/ಸಾರ್ವಜನಿಕ ಉದ್ಯೋಗಗಳಿಗೆ ಈಗಿರುವ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಅಧ್ಯಕ್ಷತೆಯಲ್ಲಿ ಫೆ.10ರಂದು ಮೈಸೂರಿನಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕಲಾ ಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹುಣಸೂರು ರಸ್ತೆ ಮೈಸೂರು ನಗರ ಇಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.

ಜಾಹೀರಾತು

ಬಂಟ್ವಾಳ ತಾಲೂಕು ವ್ಯಾಪ್ತಿಗೊಳಪಡುವ ಸಂಘಟನೆಗಳ ಮುಖಂಡರು ಅಥವಾ ಸಂಘ ಸಂಸ್ಥೆಗಳು ಮತ್ತು ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಈ ಸಭೆಯಲ್ಲಿ ಭಾಗವಹಿಸಲು ಕೋರಲಾಗಿದೆ.

ಸಮಾಲೋಚನಾ ಸಭೆಯಲ್ಲಿ ಮೌಖಿಕವಾಗಿ ವಿಚಾರ ಅಥವಾ ಅಭಿಪ್ರಾಯಗಳನ್ನು ತಿಳಿಸಬಯಸುವವರು, ಕಾರ್ಯಕ್ರಮ ಪ್ರಾರಂಭವಾಗುವ ಒಂದು ಗಂಟೆ ಮೊದಲು ರಂಗಮಂದಿರದ ಹೊರಗಡೆ, ಅದಕ್ಕಾಗಿ ತೆರೆಯಲಾಗುವ ಕೌಂಟರ್‌ಗಳಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳವುದು. ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ತಿಳಿಸಲು ಅವಕಾಶವಿದೆ.

ವಿಷಯಕ್ಕೆ ಸಂಬಂಧಪಟ್ಟ ಸಂಕ್ಷಿಪ್ತವಾಗಿ ಹೆಚ್ಚು ಸಮಯ ತೆಗೆದುಕೊಳ್ಳದೆ ತಮ್ಮ ಅಭಿಪ್ರಾಯ ಮಂಡಿಸುವುದು. ಸಮಾಲೋಚನಾ ಸಭೆಯಲ್ಲಿ ಸಂಘಟನೆಗಳ ಮುಖಂಡರು ಅಥವಾ ಸಂಘ ಸಂಸ್ಥೆಗಳು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪ.ಜಾತಿ, ಪಂಗಡ ಮುಖಂಡರ ಸಮಾಲೋಚನಾ ಸಭೆಗೆ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*