ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜದ ಕೆರೆಗೆ ಭಾನುವಾರ ರಾತ್ರಿ ಸ್ನಾನಕ್ಕೆಂದು ಇಳಿದ ಯುವಕ ಮೃತಪಟ್ಟಿದ್ದಾರೆ.
ಜಾಹೀರಾತು
ಕಡ್ತಲಬೆಟ್ಟು ನಿವಾಸಿ ಸೇಸಪ್ಪ ಮಡಿವಾಳ ಎಂಬವರ ದ್ವಿತೀಯ ಪುತ್ರ ಸುಕೇಶ್ (25) ಮೃತಪಟ್ಟ ಯುವಕ. ಇವರು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತನ್ನಿಬ್ಬರು ಸ್ನೇಹಿತರೊಂದಿಗೆ ರಜಾ ಹಿನ್ನೆಲೆಯಲ್ಲಿ ಕಾರಿಂಜ ಕ್ಷೇತ್ರಕ್ಕೆ ಸಂಜೆ ಆಗಮಿಸಿದ್ದರು. ಈ ಸಂದರ್ಭ ಸ್ನಾನಕ್ಕಿಳಿದ ವೇಳೆ ಕೆರೆಯ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿದ್ದು, ಸ್ನೇಹಿತರು ಬೊಬ್ಬೆ ಹೊಡೆದಾಗ ಸ್ಥಳೀಯರು ಕೂಡಲೇ ಅಗ್ನಿಶಾಮಕದಳ, ಪೊಲೀಸರನ್ನು ಕರೆಯಿಸಿದ್ದಾರೆ. ರಾತ್ರಿ ಸುಮಾರು 8.30ರ ಆಸುಪಾಸಿಗೆ ಮೃತದೇಹ ದೊರಕಿದೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಾರಿಂಜದಲ್ಲಿ ಕೆರೆಗಿಳಿದ ಯುವಕ ಮೃತ್ಯುವಶ"
Be the first to comment on "ಕಾರಿಂಜದಲ್ಲಿ ಕೆರೆಗಿಳಿದ ಯುವಕ ಮೃತ್ಯುವಶ"