ಬಂಟ್ವಾಳ

ಕಾರಿಂಜದಲ್ಲಿ ಕೆರೆಗಿಳಿದ ಯುವಕ ಮೃತ್ಯುವಶ

ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜದ ಕೆರೆಗೆ ಭಾನುವಾರ ರಾತ್ರಿ ಸ್ನಾನಕ್ಕೆಂದು ಇಳಿದ ಯುವಕ ಮೃತಪಟ್ಟಿದ್ದಾರೆ.

ಜಾಹೀರಾತು

ಕಡ್ತಲಬೆಟ್ಟು ನಿವಾಸಿ ಸೇಸಪ್ಪ ಮಡಿವಾಳ ಎಂಬವರ ದ್ವಿತೀಯ ಪುತ್ರ ಸುಕೇಶ್ (25) ಮೃತಪಟ್ಟ ಯುವಕ. ಇವರು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತನ್ನಿಬ್ಬರು ಸ್ನೇಹಿತರೊಂದಿಗೆ ರಜಾ ಹಿನ್ನೆಲೆಯಲ್ಲಿ ಕಾರಿಂಜ ಕ್ಷೇತ್ರಕ್ಕೆ ಸಂಜೆ ಆಗಮಿಸಿದ್ದರು. ಈ ಸಂದರ್ಭ ಸ್ನಾನಕ್ಕಿಳಿದ ವೇಳೆ ಕೆರೆಯ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿದ್ದು, ಸ್ನೇಹಿತರು ಬೊಬ್ಬೆ ಹೊಡೆದಾಗ ಸ್ಥಳೀಯರು ಕೂಡಲೇ ಅಗ್ನಿಶಾಮಕದಳ, ಪೊಲೀಸರನ್ನು ಕರೆಯಿಸಿದ್ದಾರೆ. ರಾತ್ರಿ ಸುಮಾರು 8.30ರ ಆಸುಪಾಸಿಗೆ ಮೃತದೇಹ ದೊರಕಿದೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ