ಮುಜರಾಯಿ ಇಲಾಖೆಯ ಸಪ್ತಪದಿ ಯೋಜನೆಗೆ ಉತ್ತಮ ಬೆಂಬಲ

  • ನಂದಾವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ರಾಜ್ಯ ಮುಜರಾಯಿ ಇಲಾಖೆ ಆಯೋಜಿಸಿರುವ ಆಯ್ದ 100 ದೇವಸ್ಥಾನಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಉತ್ತಮ ಬೆಂಬಲ, ಪ್ರೋತ್ಸಾಹ ದೊರಕುತ್ತಿದೆ. ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

www.bantwalnews.com Editor: Harish Mambady

ಜಾಹೀರಾತು

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಮಂಗಳವಾರ ಭೇಟಿ ನೀಡಿದ ವೇಳೆ ಮುಜರಾಯಿ ಇಲಾಖೆಯ ವತಿಯಿಂದ ಮೇ 24ರಂದು ನಂದಾವರ ಕ್ಷೇತ್ರದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹದ ಕುರಿತು ವಿವರ ಪಡೆದುಕೊಂಡ ಬಳಿಕ ಮಾತನಾಡಿದ ಅವರು, ರಾಜ್ಯ ಮುಜರಾಯಿ ಇಲಾಖೆ ಸಾಮೂಹಿಕ ವಿವಾಹ ಯೋಜನೆಗೆ ಎಲ್ಲಡೆಯಿಂದ ವ್ಯಾಪಕ ಬೆಂಬಲ ಲಭಿಸಿದೆ. ಈ ವರ್ಷ ವಧು-ವರರ ಸಂಖ್ಯೆ ಕಡಿಮೆಯಿದ್ದರೂ ಭವಿಷ್ಯದಲ್ಲಿ ಇದೊಂದು ಉತ್ತಮ ಯೋಜನೆಯಾಗಿ ಹೊರಹೊಮ್ಮಲಿದೆ.
ಸರಳವಾಗಿ ವಿವಾಹವಾಗಲು ಬಯಸುವ ಎಲ್ಲರಿಗೂ ಇಲ್ಲಿ ಅವಕಾಶವಿದ್ದು, ಏ. 26 ಮತ್ತು ಮೇ 24ರಂದು ಈ ವಿವಾಹಗಳು ನಡೆಯಲಿವೆ. ಈ ವಿವಾಹ ಸಮಾರಂಭದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಸಪ್ತಪದಿ ರಥವನ್ನೂ ಬಿಡುಗಡೆ ಮಾಡಲಾಗಿದೆ. ವಧು-ವರರಿಗೆ ನೋಂದಣಿಗೆ ಮಾ. 27 ಕೊನೆಯ ದಿನಾಂಕವಾಗಿದ್ದು, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಒಂದು ಕ್ಷೇತ್ರಕ್ಕೆ ಬಂದು ವಧು-ವರರನ್ನು ಆಶೀರ್ವಾದ ಮಾಡಲು ಒಪ್ಪಿಕೊಂಡಿದ್ದಾರೆ ಎಂದರು.

ಇ-ಆಡಳಿತಕ್ಕೆ ಚಿಂತನೆ:
ಮುಜರಾಯಿ ದೇವಸ್ಥಾನಗಳಲ್ಲಿ ಯಾವುದೇ ಅಭಿವೃದ್ಧಿಯ ಅನುಮೋದನೆಗೆ ಅಲೆದಾಡಬೇಕಾದ ಸ್ಥಿತಿ ಇದ್ದು, ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಲು ಇ-ಆಡಳಿತ ಜಾರಿಗೆ ತರಲು ಯೋಚಿಸಲಾಗಿದೆ. ಜತೆಗೆ ದೇವಸ್ಥಾನಗಳ ಮೂಲಕ ಮಹಿಳೆಯರು, ದುರ್ಬಲರ ಶ್ರೇಯಸ್ಸಿಗೆ ಯಾವುದಾದರೂ ಕಾರ್ಯಕ್ರಮ ನಡೆಸುವ ಚಿಂತನೆ ಇದೆ ಎಂದರು.

ಜಾಹೀರಾತು

ಸಂಪರ್ಕ ರಸ್ತೆಗೆ ಮನವಿ:

ಭಕ್ತರ ಅನುಕೂಲದ ದೃಷ್ಟಿಯಿಂದ ನಂದಾವರ ಕ್ಷೇತ್ರಕ್ಕೆ ಪಾಣೆಮಂಗಳೂರಿನಿಂದ ನೇರ ಸಂಪರ್ಕಕ್ಕೆ ರಸ್ತೆಯ ಪ್ರಸ್ತಾಪವೊಂದಿದೆ. ಈ ಹಿಂದೆ ಬಂಟ್ವಾಳ ಶಾಸಕರಾಗಿದ್ದ ಬಿ.ರಮಾನಾಥ ರೈ ಅವರು ಸುಮಾರು 6.40 ಕೋ.ರೂ.ಗಳ ಪ್ರಸ್ತಾಪವನ್ನು ಲೋಕೋಪಯೋಗಿ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಿಕೊಟ್ಟಿದ್ದರು. ಈಗಿನ ಶಾಸಕ ರಾಜೇಶ್ ನಾಯ್ಕ್ ಅವರು 7 ಕೋ.ರೂ.ಗಳ ಪ್ರಸ್ತಾವನೆಯನ್ನು ನೀಡಿದ್ದಾರೆ. ಇದರ ಕುರಿತು ಗಮನ ಹರಿಸಲು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಭಂಡಾರಿ ಮನವಿ ಮಾಡಿದರು.

ಕ್ಷೇತ್ರದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ, ರಾಜ್ಯ ಬಾಲಭವನ ಸೊಸೈಟಿಯ ಮಾಜಿ ಅಧ್ಯಕ್ಷೆ ಸುಲೋಚನ ಜಿ.ಕೆ.ಭಟ್, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಧಾರ್ಮಿಕ ಕ್ಷೇತ್ರಗಳ ಪ್ರಮುಖರು ಭಾಗವಹಿಸಿದ್ದರು. ಕ್ಷೇತ್ರಕ್ಕೆ ಸೋಲಾರ್ ವ್ಯವಸ್ಥೆ ನೀಡುವ ಕುರಿತ ಮನವಿಯನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯೆ ರಮಾ ಎಸ್.ಭಂಡಾರಿ ವಾಚಿಸಿದರು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಭಂಡಾರಿ ಸ್ವಾಗತಿಸಿದರು. ಸದಸ್ಯ ಡಾ. ಎಸ್.ಎಂ.ಗೋಪಾಲಕೃಷ್ಣ ಆಚಾರ್ಯ ವಂದಿಸಿದರು. ಎಸ್.ಗಂಗಾಧರ ಭಟ್ ಕೊಳಕೆ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮುಜರಾಯಿ ಇಲಾಖೆಯ ಸಪ್ತಪದಿ ಯೋಜನೆಗೆ ಉತ್ತಮ ಬೆಂಬಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*