ಕರಿಯಂಗಳ ಪ್ರದೇಶದಲ್ಲಿ ಮರಳುಗಾರಿಕೆ ಅಕ್ರಮವಾಗಿ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಕಂದಾಯ ಹಾಗೂ ಗಣಿ ಮತ್ತು ಪೊಲೀಸ್ ಇಲಾಖೆಗಳ ತಂಡ ಬುಧವಾರ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಬೋಟ್, ಲಾರಿ ಮತ್ತು ಹಿಟಾಚಿಗಳನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಂಡು ಗಣಿ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ. ಈ ವೇಳೆ ಅಲ್ಲಿ ಕಾರ್ಮಿಕರು ಪರಾರಿಯಾಗಿದ್ದು, 11 ಬೋಟುಗಳು, 6 ಲಾರಿಗಳು ಮತ್ತು ಒಂದು ಹಿಟಾಚಿ ಯಂತ್ರವನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಗಣಿ ಇಲಾಖೆಯವರು ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮರಳುಗಾರಿಕೆ ಅಕ್ರಮ ದೂರು: ಅಧಿಕಾರಿಗಳ ತಂಡ ಕಾರ್ಯಾಚರಣೆ"
Be the first to comment on "ಮರಳುಗಾರಿಕೆ ಅಕ್ರಮ ದೂರು: ಅಧಿಕಾರಿಗಳ ತಂಡ ಕಾರ್ಯಾಚರಣೆ"