ಬಂಟ್ವಾಳ

ಸಿಪಿಐ ಮುಂದಾಳು, ಬಂಟ್ವಾಳ ಪುರಸಭೆ ಮಾಜಿ ಸದಸ್ಯೆ ಯಮುನಾ ನಿಧನ

ಬಂಟ್ವಾಳದ ದಿ.ಈಶ್ವರ ಕರಂಬೇರ ಅವರ ಪತ್ನಿ, ಸತತ ಎರಡು ಅವಧಿಯಲ್ಲಿ ಬಂಟ್ವಾಳ ಪುರಸಭೆಗೆ ಸಿಪಿಐ ನಿಂದ  ಪ್ರತಿನಿಸಿದ್ದ ಮಾಜಿ ಸದಸ್ಯೆ ಬಿ.ಯಮುನಾ (75) ಅಲ್ಪಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಇಬ್ಬರು ಪುತ್ರರನ್ನು ಅವರು ಹೊಂದಿದ್ದರು. ಕೌನ್ಸಿಲರ್ ಆಗಿದ್ದ ಸಂಧರ್ಭ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಬೀಡಿ ಕಾರ್ಮಿಕರ ಚಳುವಳಿ, ರೈತರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಸಂತಾಪ ವ್ಯಕ್ತಪಡಿಸಿದ್ದಾರೆ  ಸಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್, ಸಹ ಕಾರ್ಯದರ್ಶಿ ಸುರೇಶ್ ಕುಮಾರ್, ಜಿಲ್ಲಾ ಸಹ ಕಾರ್ಯದರ್ಶಿ ವಿ.ಎಸ್ ಬೇರಿಂಜ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ರಾವ್, ಕರುಣಾಕರ್, ಪಿ.ವಿಠಲ ಬಂಗೇರ, ಪ್ರೇಮನಾಥ ಕೆ. ಮಾಜೀ ಉಸ್ತುವಾರಿ ಸಚಿವ ರಮನಾಥ ರೈ, ಚಂದ್ರ ಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಉದ್ಯಮಿ  ಸೇಸಪ್ಪ ಕೋಟ್ಯಾನ್, ಐತಪ್ಪ ಆಳ್ವ ಅಂತಿಮ ದರ್ಶನ ಪಡೆದು ಸಂತಾಪ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.