ಬಂಟ್ವಾಳ

ಬಂಟ್ವಾಳದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆ

ಸುಮಾರು 280 ವರ್ಷಗಳ ಹಿಂದೆಯೆ ದೂರದೃಷ್ಟಿ ಹೊಂದಿದ ಪವಾಡ ಪುರುಷ ಸಂತ ಸೇವಾಲಾಲರು ಪರಿಸರದಲ್ಲಾಗಬಹುದಾದ ಬದಲಾವಣೆಗಳನ್ನು ಅರಿತಿದ್ದರು ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನ ಮಿನಿವಿಧಾನಸೌಧ ಸಭಾಂಗಣದಲ್ಲಿ ಶನಿವಾರ  ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಹಿರ್ಯಾ ನಾಯ್ಕ್ ಪ್ರಾರ್ಥಿಸಿದರು. ನಿಕಟ ಪೂರ್ವ ಜಂಟಿ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್ ದಿಕ್ಸೂಚಿ ಭಾಷಣ ಮಾಡಿದರು. ಶಿರಸ್ತೇದಾರ್ ಶ್ರೀಧರ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶುಕುಮಾರ್. ಸಮಾಜ ಬಾಂಧವರಾದ  ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕೆ.ಎಚ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕರಿಬಸಪ್ಪ ನಾಯ್ಕ್, ಸಲಹಾ ಸಮಿತಿ ಸದಸ್ಯರಾದ ಕಲ್ಲುದೇನು ಲಮಾಣಿ, ತೊಳಚ ನಾಯ್ಕ್, ಲೋಕ ನಾಯ್ಕ್, ಚಂದ್ರಶೇಖರ ನಾಯ್ಕ್, ದಿಲಿಪ್ ಕುಮಾರ್ ರಜಪೂತ್, ತಾರೇಶ್ ನಾಯ್ಕ್, ಕೃಷ್ಣ ನಾಯ್ಕ್, ಲಕ್ಷ್ಮಣ್  ಉಪಸ್ಥಿತರಿದ್ದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts