ಕಲ್ಲಡ್ಕ

ಸಶಕ್ತ ಭಾರತಕ್ಕೆ ಸದೃಢ ಹೆಜ್ಜೆ ಅಡಿಪಾಯ

  • ಕಲ್ಲಡ್ಕದಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಚಿಂತನ ಮಂಥನ

ಬಂಟ್ವಾಳನ್ಯೂಸ್   ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಸಶಕ್ತ ಭಾರತ ನಿರ್ಮಾಣಕ್ಕೆ ಸದೃಢ ಹೆಜ್ಜೆ ಎಂಬ ವಿಚಾರಕ್ಕೆ ಸಂಬಂಧಿಸಿ ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯ ಆಶ್ರಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಸೋಮವಾರ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುತ್ತಿರುವುದು.

ಕಾರ್ಯಕ್ರಮವನ್ನು ಕಲಾವಿದೆ, ನ್ಯಾಯವಾದಿ ಮಾಳವಿಕಾ ಅವಿನಾಶ್ ಉದ್ಘಾಟಿಸಿ, ಇತಿಹಾಸ, ಸಂಶೋಧನೆಯತ್ತ ವಿದ್ಯಾರ್ಥಿಗಳು ಗಮನಹರಿಸಬೇಕಾಗಿದೆ ಎಂದರು.

ಬಿ.ಎಲ್.ಸಂತೋಷ್ ಮಾತನಾಡಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾತನಾಡಿ, ಇಂದು ರಕ್ಷಣಾತ್ಮಕವಾಗಿಯಷ್ಟೇ ಅಲ್ಲ, ಆರ್ಥಿಕವಾಗಿ ಭಾರತ ಸಶಕ್ತವಾಗಿ ಮುನ್ನಡೆಯುತ್ತಿದ್ದು, ಸ್ವಾವಲಂಬಿಯಾಗುವತ್ತ ಸಾಗಿದೆ ಎಂದರು. ಜನರಿಗೆ ಅತಿಯಾದ ಉಚಿತ ಸ್ಕೀಮ್ ಗಳನ್ನು ಒದಗಿಸಿ, ಅವರನ್ನು ಮತ್ತಷ್ಟು ನಿಷ್ಕ್ರಿಯರನ್ನಾಗಿಸುವ ಬದಲು ಕ್ರಿಯಾಶೀಲರನ್ನಾಗಿಸುವ ನೆರವು ನೀಡುವುದರ ಮೂಲಕ ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಕನಸನ್ನು ಈಡೇರಿಸುವ ಕಾರ್ಯವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ನಡೆಸುತ್ತಿದೆ ಎಂದು ಬಿ.ಎಲ್. ಸಂತೋಷ್ ಹೇಳಿದರು.

ಜಾಹೀರಾತು

ಮಾಳವಿಕಾ ಅವಿನಾಶ್ ಮಾತನಾಡಿದರು.

 ಪೌರತ್ವ ತಿದ್ದುಪಡಿ ಕಾಯ್ದೆ, ಘಟನೆಗಳ ಸುತ್ತಮುತ್ತಲಿನ ವಿಚಾರಗಳ ಬಗ್ಗೆ ಮಾತನಾಡಿದ ಮಾಳವಿಕಾ ಅವಿನಾಶ್, ಸಿಎಎ ಎಂಬುದು ಪೌರತ್ವ ಕಿತ್ತುಕೊಳ್ಳುವ ಕಾಯ್ದೆಯಲ್ಲ ಎಂಬ ವಿಚಾರವನ್ನು ಮರೆಮಾಚಿ, ಪ್ರತಿಭಟನೆ ನೆಪದಲ್ಲಿ ಸಮಾಜವನ್ನು ಒಡೆಯುವ ಕಾರ್ಯವನ್ನು ಕಾಂಗ್ರೆಸ್ ಸಹಿತ ಕೆಲ ಶಕ್ತಿಗಳು ನಡೆಸುತ್ತಿವೆ ಎಂದು ಅಭಿಪ್ರಾಯಪಟ್ಟರು. ಮಹಮ್ಮದ್ ಆಲಿ ಜಿನ್ನಾ ಭಾರತ ಪ್ರತ್ಯೇಕತಾವಾದವನ್ನು ಮಂಡಿಸಿದರೆ, ಇಂದು ಅವರ ಹೆಸರನ್ನು ಪ್ರತಿಭಟನೆಗಳಲ್ಲಿ ಹೇಳಲಾಗುತ್ತಿರುವುದು ಗಂಭೀರ ವಿಚಾರ ಎಂದರು.

ಚಿಂತಕ, ವಿಮರ್ಶಕರೂ ಆಗಿರುವ ಬೆಂಗಳೂರಿನ ಆರೋಹಿ ರಿಸರ್ಚ್ ಫೌಂಡೇಶನ್ ನ ನಿರ್ದೇಶಕ ಎಂ.ಎಸ್.ಚೈತ್ರ ಮಾತನಾಡಿ, ಜನಸಂಖ್ಯೆಯಿಂದಾಗುವ ಲಾಭ, ನಷ್ಟ ಹಾಗೂ ಅಪಾಯಗಳ ಬಗ್ಗೆ ಬೆಳಕು ಚೆಲ್ಲಿದರು.

ಜಾಹೀರಾತು

ದಿಕ್ಸೂಚಿ ಭಾಷಣ ಮಾಡಿದ ಡಾ. ಪ್ರಭಾಕರ ಭಟ್ ಕಲ್ಲಡ್ಕ, 300 ವರ್ಷಗಳ ಕಾಲ ಇಂಗ್ಲೀಷರು ಭಾರತೀಯರನ್ನು ಬೌದ್ಧಿಕವಾಗಿ ಕುಗ್ಗಿಸುವ ಕಾರ್ಯ ನಡೆಸಿದರು. ಶ್ರೀಮಂತ ದೇಶವಾಗಿದ್ದ ಭಾರತದ ಶಿಕ್ಷಣ ಪರಂಪರೆಯನ್ನು ರಾಘವೇಶ್ವರ ಸ್ವಾಮೀಜಿ ತಕ್ಷಶಿಲಾ ಮಾದರಿಯ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಹೊರಟಿದ್ದಾರೆ. ಇಂಥ ಬೆಳವಣಿಗೆ ನಡೆಯುತ್ತಿರುವ ಹೊತ್ತಿನಲ್ಲಿ ಭಾರತದ ಪ್ರಗತಿ, ಸಶಕ್ತ ಬೆಳವಣಿಗೆಗೆ ವಿಚಾರಸಂಕಿರಣಗಳು ಅಗತ್ಯವಿದೆ. ಉತ್ತಮ ಚರ್ಚೆಗಳು ಆಗಬೇಕಾಗಿದೆ ಎಂದರು. ಬೌದ್ಧಿಕ ದಾಸ್ಯದಿಂದ ಭಾರತ ನಲುಗಿದೆ ಎಂದು ಸಮಾರೋಪ ಭಾಷಣದಲ್ಲಿ ಹೇಳಿದ ಡಾ.ಬಿ.ವಿ.ವಸಂತಕುಮಾರ್, ಸರ್ವೇ ಜನಾಃ ಸುಖಿನೋ ಭವಂತು ಎಂಬ ಥಿಯರಿಯನ್ನು ಅನುಸರಿಸುತ್ತಿದ್ದ ನಾವು, ಮಹಾತ್ಮಾ ಗಾಂಧೀಜಿ ಮತ್ತು ಅಂಬೇಡ್ಕರ್ ಹೇಳಿದ್ದನ್ನು ಅಂದು ನಮ್ಮನ್ನಾಳಿದ ನಾಯಕರು ಅರ್ಥ ಮಾಡಿಕೊಂಡಿದ್ದರೆ, ಇಂದು ಈ ಸಮಸ್ಯೆಗಳು ಉದ್ಭವಿಸುತ್ತಿರಲಿಲ್ಲ ಎಂದರು.

ಈ ಸಂದರ್ಭ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಯತಿರಾಜ್ ವಿವಿಧ ಕಾರ್ಯಕ್ರಮಗಳನ್ನು ನಿರೂಪಿಸಿದರು. ಸಂವಾದ ಕಾರ್ಯಕ್ರಮಗಳನ್ನು ಸುನೀಲ್ ಕುಲಕರ್ಣಿ, ಪ್ರೊ.ಪಿ.ಎಲ್. ಧರ್ಮ ನಡೆಸಿಕೊಟ್ಟರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ