ಬಂಟ್ವಾಳ

ತುಳುವಿಗೆ ರಾಜ್ಯಭಾಷೆ: ಸಿಎಂಗೆ ಶಾಸಕ ರಾಜೇಶ್ ನಾಯ್ಕ್ ಪತ್ರ

ತುಳುಭಾಷೆಗೆ ರಾಜ್ಯಭಾಷೆಯ ಸ್ಥಾನಮಾನಕೊಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪತ್ರ ಬರೆದಿದ್ದಾರೆ.

ಜಾಹೀರಾತು

ತುಳುಭಾಷೆ ಹಾಗೂ ತುಳುನಾಡಿನ ಜನರು ತಮ್ಮ ಭಾಷೆಯ ಮೇಲೆ ಅಪಾರವಾದ ಅಭಿಮಾನವನ್ನು ಹೊಂದಿದ್ದಾರೆ. ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಬೇಕೆನ್ನುವುದು ಸಮಸ್ತ ತುಳುವರ ಹಲವು ವರ್ಷದ ಬೇಡಿಕೆಯಾಗಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.  ತುಳುವಿಗೆ ತನ್ನದೇ ಆದ ಲಿಪಿ ಕೂಡ ಇದ್ದು,ಪ್ರಸ್ತುತ ದ.ಕ.,ಉಡುಪಿ ಜಿಲ್ಲೆಯ ಶಾಲೆಗಳಲ್ಲು 6 ನೇ ತರಗತಿತಿಂದ 10ನೇ ತರಗತಿಯವರೆಗೆ 2009 ರಿಂದಲೇ ತುಳುಪಠ್ಯವನ್ನು ತೃತೀಯಭಾಷೆಯನ್ನಾಗಿ ಬೋಧಿಸಲಾಗುತ್ತಿದೆ ಹಾಗೆಯೇ ಪದವಿ,ಸ್ನಾತಕೋತ್ತರ ವಿಭಾಗದಲ್ಲಿಯು ತುಳುಪಠ್ಯವನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿರುವ ಶಾಸಕ ರಾಜೇಶ್ ನಾಯ್ಕ್ ತುಳುಭಾಷೆಯ ಉಳಿವಿಗೆ ಮಾನ್ಯತೆಯನ್ನು ಸಲ್ಲಿಸುವ ಅವಕಾಶ ಬಂದಿದ್ದು,ಸಂವಿಧಾನದ 8 ನೇ ಪರಿಚ್ಚೇಧಕ್ಕೆ ಸೇರಿಸಲು ಪೂರಕವಾಗಿ ತುಳುವನ್ನು ರಾಜ್ಯದ ಅಧಿಕೃತಭಾಷೆಯಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ