ಬಂಟ್ವಾಳ

ಬಂಟ್ವಾಳದಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ

ದಲಿತ ವಚನಕಾರರು ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಮಾಡಿದ್ಜಾರೆ. 12 ನೇ ಶತಮಾನದಲ್ಲಿಯೇ ಮಾನವರೆಲ್ಲರೂ ಒಂದೇ ಎಂದು ತೋರಿಸಿಕೊಟ್ಟ‌ ಅವರ ವಚನಗಳು ಇಂದಿನ ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗುತ್ತದೆ ಎಂದು ಪಾಣೆಮಂಗಳೂರು ನಾಡಕಚೇರಿ ಉಪತಹಸೀಲ್ದಾರ್ ರೂಪೇಶ್ ಹೇಳಿದರು.

ಜಾಹೀರಾತು

 

ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ರಾಜೇಶ್ ನಾಯ್ಕ್ ಮಾತನಾಡಿ, ದಲಿತ ವಚನಕಾರರು ಉಳಿದವರಿಗೆ ಸರಿಸಮಾನವಾಗಿ ನಿಂತು ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ತಮ್ಮ ತೀಕ್ಷ್ಣ ನುಡಿಗಳಿಂದ ಯಾವುದೇ ಹಿಂಜರಿಕೆಯಿಲ್ಲದೆ ವಚನಗಳನ್ನು ರಚಿಸಿದರು ಎಂದರು. ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿಗಳು. ಗ್ರಾಮ ಲೆಕ್ಕಾಧಿಕಾರಿ. ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.