ಐಸ್ ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಚಿನ್ನದ ಪದಕ ನೀಡಿ ಅಭಿನಂದನೆ

ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಂಗಳೂರಿನ ಕುಮಾರಿ ಅನಘಾ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಿನ್ನದ ಪದಕ ನೀಡಿ ಅಭಿನಂದಿಸಿದರು.

ಜಾಹೀರಾತು

ಐಸ್ ಸ್ಕೇಟಿಂಗ್ ಅನ್ನುವ ಅಪರೂಪದ ಹಾಗೂ ಕಷ್ಟಕರವಾದ ಕ್ರೀಡೆಯಲ್ಲಿ ಅತೀ ಕಿರಿಯ ವಯಸ್ಸಿನಲ್ಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದು ನಮ್ಮ ಜಿಲ್ಲೆಯ ಕೀರ್ತಿ ಪತಾಕೆ‌ಯನ್ನು ಹಾರಿಸಿದ ಅನಘಾ ಇನ್ನಷ್ಟು ಸಾಧನೆ ಮಾಡುವಂತೆ ಮಂಜುನಾಥ ಸ್ವಾಮಿ ಹರಸಲಿ ಎಂದು ಅವರು ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ,ಅನಘಾ ರ ತಂದೆ ಡಾ.ರಾಜೇಶ್ ಹುಕ್ಕೇರಿ,ತಾಯಿ ಡಾ.ಅನಿತಾ ರಾಜೇಶ್, ಅಜ್ಜಿ ಮೀನಾಕ್ಷಿ ಆರ್ ಪುತ್ರನ್ ಜೊತೆಗಿದ್ದರು.

ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅನಘಾ ಈವರೆಗೆ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 23 ಚಿನ್ನದ ಪದಕ,9 ಬೆಳ್ಳಿ ಹಾಗೂ 6 ಕಂಚಿನ‌ ಪದಕ ಪಡೆದಿದ್ದಾರೆ.ಮಂಗಳೂರಿನ‌ ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಜಾಹೀರಾತು

ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಐಸ್ ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಚಿನ್ನದ ಪದಕ ನೀಡಿ ಅಭಿನಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*