ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಫೆ.26ರಿಂದ ಮಾ.1ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ

ಅಮ್ಟೂರು ಗ್ರಾಮದ ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಫೆ.,26 ರಿಂದ ಮಾ.1 ರವರೆಗೆ ಶ್ರೀ ಮಂತ್ರದೇವತಾ ಶಿಲಾಮೂರ್ತಿಯ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಮಂತ್ರದೇವತೆ, ಗುಳಿಗ ಹಾಗೂ ಕೊರಗಜ್ಜ ದೈವಗಳ ವಾರ್ಷಿಕ ಕೋಲೋತ್ಸವ ನಡೆಯಲಿದೆ.

ಜಾಹೀರಾತು

ಭಾನುವಾರ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಾನಿಧ್ಯದ ಮುಖ್ಯಸ್ಥರಾದ, ಮಂತ್ರದೇವತಾ ಆರಾಧಕ ಮನೋಜ್ ಕುಮಾರ್ ಕಟ್ಟೆಮಾರು ಉತ್ಸವದ ಬಗ್ಗೆ ವಿವರ ನೀಡಿದರು.

ಫೆ.26 ರಂದು ಸಂಜೆ 6 ಗಂಟೆಗೆ ಕಲ್ಲಡ್ಕ ಶ್ರೀರಾಮ ಮಂದಿರದಿಂದ ಶ್ರೀ ಮಂತ್ರದೇವತೆಯ ಶಿಲಾಮಯ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದ್ದು ಡಾ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸುವರು.

ಫೆ.27 ರಂದು ಸಂಜೆ 6 ಗಂಟೆಗೆ ನಾಗದೇವರ ಪ್ರೀತ್ಯರ್ಥ ಅಶ್ಲೇಷ ಬಲಿ ತನು ತರ್ಪಣ ಸೇವೆ, ರಾತ್ರಿ ವೈದಿಕ ಕಾರ್ಯಕ್ರಮಗಳು, ಫೆ. 28ರಂದು ಬೆಳಿಗ್ಗೆ 8.04 ರ ಮೀನಲಗ್ನ ಸುಮುಹೂರ್ತದಲ್ಲಿ ಶ್ರೀ ಮಂತ್ರದೇವತಾ ಪುನರ್ ಪ್ರತಿಷ್ಠಾ, ಕಲಶಾಭಿಷೇಕ, ಪರ್ವಾರಾಧನೆ, ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಅನ್ನಸಂತರ್ಪಣೆ  ನಡೆಯಲಿದೆ ಎಂದು ಮನೋಜ್ ಕುಮಾರ್ ತಿಳಿಸಿದರು.

ಜಾಹೀರಾತು

ಫೆ.29ರಂದು ಬೆಳಿಗ್ಗೆ 6 ರಿಂದ ಸಂಜೆ 5 ರತನಕ ವಿವಿಧ ಭಜನಾ ಮಂಡಳಿಗಳಿಂದ ವಿಶೇಷ ಭಜನಾ ಸೇವೆ, ಸಂಜೆ ಧಾರ್ಮಿಕ ಸಭೆ, ರಾತ್ರಿ ಯಕ್ಷ- ಗಾನ- ಹಾಸ್ಯ ವೈಭವ, ಶ್ರೀ ಮಂತ್ರದೇವತೆ ಹಾಗೂ ಗುಳಿಗ ದೈವಗಳಿಗೆ ದೊಂದಿ ಬೆಳಕಿನಲ್ಲಿ ಕೋಲೋತ್ಸವ ನಡೆಯಲಿದೆ.ಮಾ.1 ರಂದು ರಾತ್ರಿ ಶ್ರೀ ಕೊರಗಜ್ಜ ದೈವದ ನರ್ತನ ಸೇವೆ ನಡೆಯಲಿದೆ ಎಂದು ಮನೋಜ್ ಕುಮಾರ್ ಕಟ್ಟೆಮಾರ್ ತಿಳಿಸಿದರು.

ಈ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆಯನ್ನು ಮನೋಜ್ ಕುಮಾರ್ ಅವರು ಆರಾಧಿಸಿಕೊಂಡು ಬರುತ್ತಿದ್ದು ದೂರದೂರಿಂದಲೂ ಅಪಾರ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸಿ ಪ್ರಸಾದವನ್ನು ಸ್ವೀಕರಿಸಿ ತಮ್ಮ ಇಷ್ಠಾರ್ಥವನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಇದೀಗ ಮಂತ್ರದೇವತೆಗೆ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ ಎಂದರು.

ಸ್ವಾಗತ ಸಮಿತಿ ಸಂಚಾಲಕ ಆರ್.ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ದಿನೇಶ್ ಅಮ್ಟೂರು, ಜಗದೀಶ್, ಕುಶಾಲಪ್ಪ ಅಮ್ಟೂರು, ಪ್ರಭಾಕರ ಶೆಟ್ಟಿ, ಕಿಶೋರ್ ಕುಮಾರ್ ಕಟ್ಟೆಮಾರು ಸುದ್ದಿಗೋಷ್ಠಿಯಲ್ಲಿದ್ದರು

ಜಾಹೀರಾತು

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಫೆ.26ರಿಂದ ಮಾ.1ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*