ಒಡ್ಡೂರು ಫಾರ್ಮ್ಸ್ ನಲ್ಲಿ ಶತಚಂಡಿಕಾಯಾಗ, ಧರ್ಮನೇಮ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ

ಫೆಬ್ರವರಿ 29ರಂದು ಮಂಗಳೂರು ತಾಲೂಕಿನ ಗಂಜೀಮಠ ಸಮೀಪ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮದೈವಕ್ಕೆ ಧರ್ಮ ನೇಮೋತ್ಸವ, ಶತಚಂಡಿಕಾಯಾಗ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಧಾರ್ಮಿಕ ಕಾರ್ಯಕ್ರಮಗಳು ಫೆ.24ರಿಂದ ಪಲ್ಕೆ ವೇದಮೂರ್ತಿ ರತೀಶ್ ಭಟ್ ಹಾಗೂ ವೇದಮೂರ್ತಿ ಶ್ರೀ ವೆಂಕಟೇಶ ತಂತ್ರಿ ಎಡಪದವು ನೇತೃತ್ವದಲ್ಲಿ ಆರಂಭಗೊಂಡಿವೆ. ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಉಷಾ ಆರ್ ನಾಯ್ಕ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಜಾಹೀರಾತು

24ರಂದು ಸಂಜೆ ಮಹಾಸುದರ್ಶನ ಯಾಗ ನಡೆದರೆ, ಮಂಗಳವಾರ ಗಣಪತಿಯಾಗ, ಸತ್ಯನಾರಾಯಣಪೂಜೆ, ಕೃಷ್ಣಮಂತ್ರ ಹೋಮ, ವಾಸ್ತುಪೂಜಾದಿ ಪ್ರಕ್ರಿಯೆಗಳು ನೆರವೇರಿದವು. 26ರಂದು ಪೂರ್ಣಮಾನ ನವಗ್ರಹಯಾಗ, ಮಂಟಪ ಸಂಸ್ಕಾರ ನಡೆಯಲಿದ್ದು, 27ರಂದು ಮೃತ್ಯುಂಜಯ ಯಾಗ, ಧರ್ಮಚಾವಡಿಯಲ್ಲಿ ನಾನಾ ಕಾರ್ಯಕ್ರಮಗಳು ನಡೆಯುವುದು. 28ರಂದು ಶುಕ್ರವಾರ ಬೆಳಗ್ಗೆ 8.04 ಮೀನ ಲಗ್ನ ಸುಮುಹೂರ್ತದಲ್ಲಿ ಧರ್ಮದೈವ ಪ್ರತಿಷ್ಠೆ, 108 ಕಲಶಾಧಿವಾಸ, ಪ್ರಧಾನ ಹೋಮ, ಸಾನಿಧ್ಯ ಕಲಶಾಧಿವಾಸ, ಪ್ರಧಾನ ಹೋಮ, ಸಾನಿಧ್ಯ ಕಲಶಾಭಿಷೇಕ, ಪರ್ವ ಸೇವೆ, ದರ್ಶನ, ಅನ್ನ ಸಂತರ್ಪಣೆ ದೇವಿ ಮಹಾತ್ಮ್ಯೆ ಪಾರಾಯಣ, ಯಾಗಕ್ಕೆ ಪೂರ್ವಭಾವಿ ತಯಾರಿ ನಡೆಯಲಿದೆ. ಇದೇ ವೇಳೆ 28ರ ಸೂರ್ಯೋದಯದಿಂದ ಮರುದಿನ ಸೂರ್ಯೋದಯದವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿವೆ. 29ರಂದು ಬೆಳಗ್ಗೆ 6ರಿಂದ ಶತಚಂಡಿಕಾಯಾಗ, 11 ಗಂಟೆಗೆ ಪೂರ್ಣಾಹುತಿ, 11.30ಕ್ಕೆ ಕೊಡಮಣಿತ್ತಾಯ ದೈವದ ಭಂಡಾರ ಏರುವುದು, ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ 2ರಿಂದ ರಾತ್ರಿ 9ರವರೆಗೆ ನಿರಂತರ ಸಾಂಸ್ಕೃತಿಕ ವೈಭವ, ರಾತ್ರಿ 9ರಿಂದ ಕೊಡಮಣಿತ್ತಾಯ ಧರ್ಮ ದೈವಕ್ಕೆ ಧರ್ಮ ನೇಮೋತ್ಸವ ನಡೆಯಲಿದೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಒಡ್ಡೂರು ಫಾರ್ಮ್ಸ್ ನಲ್ಲಿ ಶತಚಂಡಿಕಾಯಾಗ, ಧರ್ಮನೇಮ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*