ಬಂಟ್ವಾಳ

ನರಿಕೊಂಬು ಗ್ರಾಪಂನಲ್ಲಿ ಕಂದಾಯ, ಪಿಂಚಣಿ ಅದಾಲತ್

ಪಾಣೆಮಂಗಳೂರು ಹೋಬಳಿಯ ನರಿಕೊಂಬು, ಶಂಭೂರು, ಪಾಣೆಮಂಗಳೂರು, ಬಂಟ್ವಾಳ ಮೂಡ ಗ್ರಾಮಗಳ ಕಂದಾಯ ಮತ್ತು ಪಿಂಚಣಿ ಅದಾಲತ್ ನರಿಕೊಂಬು ಗ್ರಾಪಂ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಜಾಹೀರಾತು

ಕಂದಾಯ ಅದಾಲತ್ ನ ಮೂಲ ಉದ್ದೇಶ ಪಹಣಿ ಪತ್ರಿಕೆ ಯಲ್ಲಿ ಲೋಪದೋಷಗಳು ಇದ್ದರೆ ಪಹಣಿ ಸರಿಪಡಿಸುವಿಕೆ, ಪಹಣಿ ಶುದ್ಧೀಕರಣ ಆಗಿದೆ. ಪಿಂಚಣಿಗೆ ಸಂಬಂದಿಸಿದಂತೆ ಮಾಸಾಶನ ಪಡೆಯುವ ಬಡ ಫಲಾನುಭವಿಗಳಿಗೆ ಯಾವುದೇ ರೀತಿಯ ಕುಂದುಕೊರತೆ ಬಾರದಂತೆ ನೋಡಿ ಕೊಳ್ಳುವ ಸಲುವಾಗಿ ಪಿಂಚಣಿ ಅದಾಲತ್ ನಡೆಸಲಾಗುತ್ತದೆ. ಸಾರ್ವಜನಿಕರು ಈ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭೂಮಿ ಶಾಖೆಯ ಶಿರಸ್ತೇದಾರ್ ಶ್ರೀಧರ್ ತಿಳಿಸಿದರು.

ಈ ಸಂದರ್ಭದಲ್ಲಿ ಆರ್. ಆರ್ ಟಿ. ಶಾಖೆಯ ರೇಖಾ, ಅಭಿವೃದ್ಧಿ ಅಧಿಕಾರಿ ಶಿವು ಜನಕೊಂಡ, ಬಿ ಮೂಡ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಪಾಣೆಮಂಗಳೂರು ಗ್ರಾಮ ಲೆಕ್ಕಾಧಿಕಾರಿ ವಿಜೇತಾ, ನರಿಕೊಂಬು ಗ್ರಾಮ ಲೆಕ್ಕಾಧಿಕಾರಿ ಆಥಿಕ್ ಕುಮಾರ್ ಹಾಜರಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಶಂಭೂರು. ಜಯರಾಜ್. ರಂಜಿತ್ ನರಿಕೊಂಬು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

ಜಾಹೀರಾತು

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

for advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts