ಸಾರ್ವಜನಿಕ ಹಿಂದು ರುದ್ರಭೂಮಿ: ಮಾ.1ರಂದು ನರಿಕೊಂಬಿನಲ್ಲಿ ಲೋಕಾರ್ಪಣೆ

ಸಾರ್ವಜನಿಕ ಹಿಂದು ರುದ್ರಭೂಮಿ ಮಾ.1ರಂದು ನರಿಕೊಂಬಿನಲ್ಲಿ ಲೋಕಾರ್ಪಣೆ ಕುರಿತು ಸಮಿತಿ ಅಧ್ಯಕ್ಷ ಯಶೋಧರ ಕರ್ಬೆಟ್ಟು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಕೊಂಗಲಪಾದೆ ಎಂಬಲ್ಲಿ ನರಿಕೊಂಬಿನ ಸಾರ್ವಜನಿಕ ಹಿಂದು ರುದ್ರಭೂಮಿ (ದೇವಭೂಮಿ) ಸಮಿತಿ ವತಿಯಿಂದ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯ ಲೋಕಾರ್ಪಣೆ ಕಾರ್ಯ ಮಾರ್ಚ್ 1ರಂದು ನಡೆಯಲಿದೆ.

ಜಾಹೀರಾತು

ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯನ್ನು ಮಾ.1ರಂದು ಬೆಳಗ್ಗೆ 9.30ಕ್ಕೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಲೋಕಾರ್ಪಣೆ ಮಾಡುವರು ಎಂದು ರುದ್ರಭೂಮಿ ಸಮಿತಿ ಅಧ್ಯಕ್ಷ, ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಭಾ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದವರು ಹೇಳಿದರು. ಸಂಜೆ ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ವೈವಿಧ್ಯವೂ ಇರಲಿದೆ. ರಾತ್ರಿ 7 ಗಂಟೆಗೆ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಸತ್ಯ ಹರಿಶ್ಚಂದ್ರ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ಮಾ.2ರಂದು ಸಂಜೆ 7.30ರಿಂದ ಇಲ್ಲಿನ ಕ್ರೀಡಾಂಗಣದಲ್ಲಿ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಶ್ಯಾಂ ಪ್ರಸಾದ್ ಮುಖರ್ಜಿ ಬಲಿದಾನ್ ಟ್ರೋಫಿ ಹೆಸರಲ್ಲಿ ದ.ಕ.ಜಿಲ್ಲಾ ಅಮೆಚೂರ್ ಹಾಗೂ ಬಂಟ್ವಾಳ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ನಡೆಯುವ ಕಬಡ್ಡಿ ಪಂದ್ಯಾಟವನ್ನು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಉದ್ಘಾಟಿಸುವರು. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಸಹಿತ ಪ್ರಮುಖರು ಭಾಗವಹಿಸುವರು. ಈ ಸಂದರ್ಭ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ಇರಲಿವೆ ಎಂದು ಯಶೋಧರ ಕರ್ಬೆಟ್ಟು ಹೇಳಿದರು.

ರುದ್ರಭೂಮಿಯಲ್ಲಿ ಎರಡು ಚಿತಾಗಾರ ಸಹಿತ ಕಟ್ಟಿಗೆ ದಾಸ್ತಾನು ಕೊಠಡಿ, ಶೆಡ್, ಇಂಟರ್ ಲಾಕ್ ಅಳವಡಿಕೆ, ಸ್ನಾನಗೃಹ ಮತ್ತು ಶೌಚಾಲಯ ಇದೆ. ಒಂದು ಎಕರೆ ಜಮೀನಿನಲ್ಲಿ ಕ್ರೀಡಾಂಗಣ, ಬಯಲು ರಂಗಮಂದಿರ ಮತ್ತು ವಾಹನ ಪಾರ್ಕಿಂಗ್ ವ್ಯವಸ್ಥೆ ಇದೆ. ಸುಮಾರು 12 ಅಡಿ ಎತ್ತರಕ್ಕೆ ತ್ರಿಶೂಲಧಾರಿ ಶಿವನ ವಿಗ್ರಹ ನಿರ್ಮಿಸಲಾಗಿದ್ದು, 26 ಅಡಿ ಎತ್ತರದ ತ್ರಿಶೂಲವನ್ನು ಹೊಂದಾಣಿಸಲಾಗಿದೆ. ಎದುರು ಆಕರ್ಷಕ ಹೂದೋಟ ಇದೆ ಎಂದರು ಸುದ್ದಿಗೋಷ್ಠಿಯಲ್ಲಿ ಸಮಿತಿ ಗೌರವಾಧ್ಯಕ್ಷ ಬಿ.ರಘು ಸಪಲ್ಯ, ಪ್ರಮುಖರಾದ ಕಿಶೋರ್ ಶೆಟ್ಟಿ, ಪ್ರೇಮನಾಥ ಶೆಟ್ಟಿ, ವಸಂತ ಭೀಮಗದ್ದೆ, ಸುರೇಶ ಕೋಟ್ಯಾನ್ ಇದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಾರ್ವಜನಿಕ ಹಿಂದು ರುದ್ರಭೂಮಿ: ಮಾ.1ರಂದು ನರಿಕೊಂಬಿನಲ್ಲಿ ಲೋಕಾರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*