ಬಂಟ್ವಾಳ

ಬಂಟ್ವಾಳದಲ್ಲಿ ರಾಜ್ಯ ರೈತಸಂಘದಿಂದ ಅಧ್ಯಯನ ಕಾರ್ಯಾಗಾರ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಒಂದು ದಿನದ ಅಧ್ಯಯನ ಶಿಬಿರ ಮಾ.3 ರಂದು ಮಂಗಳವಾರ ಬಿ.ಸಿ.ರೋಡಿನ ರಂಗೋಲಿ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಹೇಳಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಸ್ವರಾಜ್ ಇಂಡಿಯಾ ರಾಜ್ಯಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಉದ್ಘಾಟಿಸಲಿದ್ದು, ರೈತಸಂಘ ರಾಜ್ಯಾಧ್ಯಕ್ಷ ಬಡಗಲಾಪುರ ನಾಗೇಂದ್ರ, ಪ್ರಮುಖರಾದ ನಾಗರತ್ನಮ್ಮ ವಿ.ಪಾಟೀಲ್, ಜಿ.ಟಿ.ರಾಮಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಡಾ. ಸಂದೀಪ್ ನಾಯಕ್, ಮೂಡಿಗೆರೆ ಮಂಜುನಾಥ್, ರವಿಕಿರಣ್ ಪುಣಚ ಭಾಗವಹಿಸುವರು.

ಬಳಿಕ ಇಡೀ ದಿನ ರೈತಸಂಘದ ಹುಟ್ಟು ಬೆಳವಣಿಗೆ ಸಾಗುತ್ತಿರುವ ದಾರಿ, ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು, ದೇಶದ ಆರ್ಥಿಕತೆ ಮತ್ತು ಸಾಗುತ್ತಿರುವ ಮಾರ್ಗ ಹಾಗೂ ಚಳವಳಿಗಳು ಮತ್ತು ಪರ್ಯಾಯ ರಾಜಕಾರಣ ಕುರಿತು ಬಡಗಲಾಪುರ ನಾಗೇಂದ್ರ, ರವಿಕಿರಣ್ ಪುಣಚ, ಶಿವಸುಂದರ್, ಹಾಗೂ ಅಲ್ಲಮಪ್ರಭು ಬೆಟ್ಟದೂರು ವಿಷಯ ಮಂಡಿಸುವರು ಎಂದರು. ಸಂಜೆ ನಡೆಯುವ ಸಮಾರೋಪದಲ್ಲಿ ಸಮಾರೋಪ ಭಾಷಣವನ್ನು ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಮಾಡಲಿದ್ದಾರೆ ಎಂದವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಪ್ರಮುಖರಾದ ಸುರೇಶ್‌ಚಂದ್ರ ರೈ, ವಿವಿಯನ್ ಪಿಂಟೊ, ಆಲ್ವಿನ್ ಮಿನೇಜಸ್ ಇದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ