ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಕಾಲಾವಧಿ ಬ್ರಹ್ಮರಥೋತ್ಸವ ಸೋಮವಾರ ಸೇರಿದ್ದ ಊರ, ಪರವೂರ ನೂರಾರು ಭಕ್ತರ ಸಮ್ಮುಖ ವೈಭವದಿಂದ ಸಂಜೆ ಆರಂಭಗೊಂಡಿತು.
ಜಾಹೀರಾತು
ಶ್ರೀ ತಿರುಮಲ ವೆಂಕಟರಮಣ ದೇವರಿಗೆ ಮಲ್ಲಿಗೆ ಹರಿಕೆ ಒಪ್ಪಿಸಲು ಸಾಲುಗಟ್ಟಿ ಜನರು ನಿಂತರು. ಸೋಮವಾರ ಬೆಳಗ್ಗೆ ಪ್ರಾರ್ಥನೆ ಬಳಿಕ ಮಹಾಪೂಜೆ, ಯಜ್ಞಾದಿಗಳು ನಡೆದವು. ಸಂಜೆ ೫.೩೦ಕ್ಕೆ ಬ್ರಹ್ಮರಥಾರೋಹಣ, ಸಮಾರಾಧನೆ, ರಾತ್ರಿ ಬ್ರಹ್ಮರಥೋತ್ಸವ ನಡೆಯಿತು. ಮಂಗಳವಾರ ದ್ವಾರಪೂಜೆ, ಚೂರ್ಣೋತ್ಸವ, ಅವಭೃತೋತ್ಸವ, ನದಿಸ್ನಾನ, ರಾತ್ರಿ ಸಣ್ಣರಥೋತ್ಸವ ನಡೆಯಲಿದೆ. ಫೆ.೨೭ರಂದು ಜಾತ್ರೋತ್ಸವ ಆರಂಭಗೊಂಡಿದ್ದು, ೨೭ರಂದು ಗರುಡೋತ್ಸವ, ೨೮ರಂದು ಹನುಮಂತೋತ್ಸವ ನಡೆದಿತ್ತು. ಶನಿವಾರ ರಾತ್ರಿ ಚಂಡ್ರಮಂಡಲೋತ್ಸವ ನಡೆಯಿತು. ಭಾನುವಾರ ಜೀರ್ಣೋದ್ಧಾರ ಪುನರ್ ಪ್ರತಿಷ್ಠಾಚರಣೆ, ಸಣ್ಣರಥೋತ್ಸವ ನಡೆದವು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ ವೈಭವದ ಬ್ರಹ್ಮರಥೋತ್ಸವ"
Be the first to comment on "ಬಂಟ್ವಾಳದಲ್ಲಿ ವೈಭವದ ಬ್ರಹ್ಮರಥೋತ್ಸವ"