ಬಂಟ್ವಾಳ

ಬಂಟ್ವಾಳದಲ್ಲಿ ವೈಭವದ ಬ್ರಹ್ಮರಥೋತ್ಸವ

ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಕಾಲಾವಧಿ ಬ್ರಹ್ಮರಥೋತ್ಸವ ಸೋಮವಾರ ಸೇರಿದ್ದ ಊರ, ಪರವೂರ ನೂರಾರು ಭಕ್ತರ ಸಮ್ಮುಖ ವೈಭವದಿಂದ ಸಂಜೆ ಆರಂಭಗೊಂಡಿತು.

ಜಾಹೀರಾತು

ಶ್ರೀ ತಿರುಮಲ ವೆಂಕಟರಮಣ ದೇವರಿಗೆ ಮಲ್ಲಿಗೆ ಹರಿಕೆ ಒಪ್ಪಿಸಲು ಸಾಲುಗಟ್ಟಿ ಜನರು ನಿಂತರು. ಸೋಮವಾರ ಬೆಳಗ್ಗೆ ಪ್ರಾರ್ಥನೆ ಬಳಿಕ ಮಹಾಪೂಜೆ, ಯಜ್ಞಾದಿಗಳು ನಡೆದವು. ಸಂಜೆ ೫.೩೦ಕ್ಕೆ ಬ್ರಹ್ಮರಥಾರೋಹಣ, ಸಮಾರಾಧನೆ, ರಾತ್ರಿ ಬ್ರಹ್ಮರಥೋತ್ಸವ ನಡೆಯಿತು. ಮಂಗಳವಾರ ದ್ವಾರಪೂಜೆ, ಚೂರ್ಣೋತ್ಸವ, ಅವಭೃತೋತ್ಸವ, ನದಿಸ್ನಾನ, ರಾತ್ರಿ ಸಣ್ಣರಥೋತ್ಸವ ನಡೆಯಲಿದೆ. ಫೆ.೨೭ರಂದು ಜಾತ್ರೋತ್ಸವ ಆರಂಭಗೊಂಡಿದ್ದು, ೨೭ರಂದು ಗರುಡೋತ್ಸವ, ೨೮ರಂದು ಹನುಮಂತೋತ್ಸವ ನಡೆದಿತ್ತು. ಶನಿವಾರ ರಾತ್ರಿ ಚಂಡ್ರಮಂಡಲೋತ್ಸವ ನಡೆಯಿತು. ಭಾನುವಾರ ಜೀರ್ಣೋದ್ಧಾರ ಪುನರ್ ಪ್ರತಿಷ್ಠಾಚರಣೆ, ಸಣ್ಣರಥೋತ್ಸವ ನಡೆದವು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.