ಬಂಟ್ವಾಳ

ಬಂಟ್ವಾಳದಲ್ಲಿ ವೈಭವದ ಬ್ರಹ್ಮರಥೋತ್ಸವ

ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಕಾಲಾವಧಿ ಬ್ರಹ್ಮರಥೋತ್ಸವ ಸೋಮವಾರ ಸೇರಿದ್ದ ಊರ, ಪರವೂರ ನೂರಾರು ಭಕ್ತರ ಸಮ್ಮುಖ ವೈಭವದಿಂದ ಸಂಜೆ ಆರಂಭಗೊಂಡಿತು.

ಜಾಹೀರಾತು

ಶ್ರೀ ತಿರುಮಲ ವೆಂಕಟರಮಣ ದೇವರಿಗೆ ಮಲ್ಲಿಗೆ ಹರಿಕೆ ಒಪ್ಪಿಸಲು ಸಾಲುಗಟ್ಟಿ ಜನರು ನಿಂತರು. ಸೋಮವಾರ ಬೆಳಗ್ಗೆ ಪ್ರಾರ್ಥನೆ ಬಳಿಕ ಮಹಾಪೂಜೆ, ಯಜ್ಞಾದಿಗಳು ನಡೆದವು. ಸಂಜೆ ೫.೩೦ಕ್ಕೆ ಬ್ರಹ್ಮರಥಾರೋಹಣ, ಸಮಾರಾಧನೆ, ರಾತ್ರಿ ಬ್ರಹ್ಮರಥೋತ್ಸವ ನಡೆಯಿತು. ಮಂಗಳವಾರ ದ್ವಾರಪೂಜೆ, ಚೂರ್ಣೋತ್ಸವ, ಅವಭೃತೋತ್ಸವ, ನದಿಸ್ನಾನ, ರಾತ್ರಿ ಸಣ್ಣರಥೋತ್ಸವ ನಡೆಯಲಿದೆ. ಫೆ.೨೭ರಂದು ಜಾತ್ರೋತ್ಸವ ಆರಂಭಗೊಂಡಿದ್ದು, ೨೭ರಂದು ಗರುಡೋತ್ಸವ, ೨೮ರಂದು ಹನುಮಂತೋತ್ಸವ ನಡೆದಿತ್ತು. ಶನಿವಾರ ರಾತ್ರಿ ಚಂಡ್ರಮಂಡಲೋತ್ಸವ ನಡೆಯಿತು. ಭಾನುವಾರ ಜೀರ್ಣೋದ್ಧಾರ ಪುನರ್ ಪ್ರತಿಷ್ಠಾಚರಣೆ, ಸಣ್ಣರಥೋತ್ಸವ ನಡೆದವು.

ಜಾಹೀರಾತು

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ