ರೈತರನ್ನು ಗಮನದಲ್ಲಿಟ್ಟುಕೊಂಡು ಸರ್ವೆ: ಕಂದಾಯ ಸಚಿವ ಅಶೋಕ್

ತುಂಬೆ ವೆಂಟೆಡ್ ಡ್ಯಾಂ ಪರಿಹಾರ, ಸರ್ವೆ ವಿಚಾರ ಕುರಿತು ರಾಜೇಶ್ ನಾಯ್ಕ್ ಪ್ರಸ್ತಾಪ

 

ಜಾಹೀರಾತು

ಆರ್. ಅಶೋಕ್ (ಕಂದಾಯ ಸಚಿವರು)

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರಿಗಾಗಿ ತುಂಬೆಯಲ್ಲಿ ನಿರ್ಮಿಸಲಾದ ಅಣೆಕಟ್ಟಿನ ಪರಿಹಾರ ಮತ್ತು ಸರ್ವೆ ಕಾರ್ಯವನ್ನು ರೈತರ ಗಮನಕ್ಕೆ ತಾರದೆ ನಡೆಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ವಿಧಾನಸಭಾಧಿವೇಶನದಲ್ಲಿ ಸೋಮವಾರ ಪ್ರಸ್ತಾಪಿಸಿದ್ದು, ಈ ಕುರಿತು ರೈತರನ್ನು ಗಮನದಲ್ಲಿಟ್ಟುಕೊಂಡು ಸರ್ವೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ರಾಜೇಶ್ ನಾಯ್ಕ್ ಯು. (ಬಂಟ್ವಾಳ ಶಾಸಕರು)

ಅಣೆಕಟ್ಟಿನಿಂದ ಸುಮಾರು 300 ಎಕ್ರೆಯಷ್ಟು ಭೂಮಿ ಮುಳುಗಡೆಯಾಗಿದೆ. ಸರ್ವೇಯನ್ನು ರೈತರ ಗಮನಕ್ಕೆ ತಾರದೆ ನಡೆಸಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಗಮನ ಸೆಳೆದರು. ಕೇಂದ್ರ ಜಲ ಆಯೋಗದ ಪ್ರಕಾರ ಸರ್ವೆ ಮಾಡುವ ಕುರಿತು ಶಾಸಕರು ಪ್ರಸ್ತಾಪಿಸಿದಾಗ, ಈ ಕುರಿತು ವಿಚಾರ ಮಾಡುವುದು ಹಾಗೂ ರೈತರನ್ನು ಗಮನದಲ್ಲಿ ಇಟ್ಟುಕೊಂಡು ಈ ಸರ್ವೆಯನ್ನು ಮಾಡಲಾಗುವುದು ಎಂದು ಅಶೋಕ್ ಸ್ಪಷ್ಟಪಡಿಸಿದರು.

ತುಂಬೆ ವೆಂಟೆಡ್ ಡ್ಯಾಂನ ಹಿನ್ನೀರಿನಿಂದ ಒಟ್ಟು 66.43 ಎಕರೆ ಜಮೀನು ಮುಳುಗಡೆಯಾಗುತ್ತದೆ. ಮುಳುಗಡೆ ಆಗುವ ಜಮೀನನ್ನು ಸರಕಾರದ ಆದೇಶದ ಪ್ರಕಾರ ಜಿಲ್ಲಾಧಿಕಾರಿ ಮೂಲಕ ನೇರ ಖರೀದಿ ಮುಖಾಂತರ ಖರೀದಿ ಮಾಡಲಾಗಿದೆ. ಈ ಜಮೀನಿನ 37 ಮಂದಿ ಭೂಮಾಲೀಕರಿಗೆ 9.87 ಕೋಟಿ ರೂ ಪರಿಹಾರ ಪಾವತಿಸಲಾಗಿದೆ ಎಂದು ಸಚಿವ ಅಶೋಕ್ ಉತ್ತರಿಸಿದರು. ಪರಿಹಾರಕ್ಕೆ ಒಟ್ಟು 17 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಮುಳುಗಡೆಯಾಗುವ ಒಟ್ಟು ಜಮೀನಿನ ಪೈಕಿ 54 ಮಂದಿ ಸಂತ್ರಸ್ತರಿಗೆ ಪರಿಹಾರ ಪಾವತಿಸಲು ಬಾಕಿ ಇರುತ್ತದೆ ಎಂದವರು ವಿವರಿಸಿದರು. ಮುಳುಗಡೆ ಪ್ರದೇಶಗಳಿಗೆ ಸಂಬಂಧಿಸಿದಂತೆ ನೀರಿನ ಒಸರು ಕುರಿತು ಸರ್ವೆ ಪೂರ್ಣಗೊಂಡಿದೆ. ಭೂದಾಖಲೆ ಸಹಾಯಕ ನಿರ್ದೇಶಕರು ಮತ್ತು ತಹಸೀಲ್ದಾರ್ ಅವರಿಂದ ವರದಿ ಸಿದ್ಧಪಡಿಸಲು ಕ್ರಮ ವಹಿಸಲಾಗಿದೆ ಎಂದರು. ಡ್ಯಾಂ ಸಂತ್ರಸ್ತ ರೈತರ ಹದಿನಾರು ವರ್ಷಗಳ ಹೋರಾಟಕ್ಕೆ ಬೆಂಬಲಿಸಿ ವಿಧಾನಸಭೆಯಲ್ಲಿ ಸೋಮವಾರ  ಕಂದಾಯ ಸಚಿವ ಆರ್. ಅಶೋಕ್  ಮೂಲಕ ಸರಕಾರದ ಗಮನ ಸೆಳೆದಿರವ ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ಅವರನ್ನು ತುಂಬೆ ಡ್ಯಾಂ ಸಂತ್ರಸ್ತ ರೈತರು ಹೋರಾಟ ಸಮಿತಿ ಅಭಿನಂದಿಸಿದೆ. ಡ್ಯಾಮ್ ನಿಂದ ವರತೆ ಪ್ರದೇಶಕ್ಕೂ  ಸೂಕ್ತ ಪರಿಹಾರ ದೊರಕಿಸುವ ಶಾಸಕರ ಪ್ರಯತ್ನಕ್ಕೆ  ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎo ಸುಬ್ರಹ್ಮಣ್ಯ ಭಟ್  ಕೃತಜ್ಞತೆ ಸಲ್ಲಿಸಿದ್ದಾರೆ.

ಜಾಹೀರಾತು

ತುಂಬೆ

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೈತರನ್ನು ಗಮನದಲ್ಲಿಟ್ಟುಕೊಂಡು ಸರ್ವೆ: ಕಂದಾಯ ಸಚಿವ ಅಶೋಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*