ಬಂಟ್ವಾಳ

ಮಹಿಳೆ ಸುರಕ್ಷತೆಗೆ ಕಾನೂನು ನೆರವು ಪಡೆಯಿರಿ: ನ್ಯಾಯಾಧೀಶ

ಮಹಿಳೆಯರ ರಕ್ಷಣೆ ಸಮಾಜದ ಜವಾಬ್ದಾರಿಯಾಗಿದ್ದು, ಮನೆ, ಅವರು ಕೆಲಸ ಮಾಡುವ ಜಾಗಗಳಲ್ಲಿ ಶೋಷಣೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಅವರ ಸುರಕ್ಷಣೆಗಾಗಿ ಕಾನೂನುಗಳ ನೆರವು ಕೂಡ ಇದ್ದು, ಇದರ ಮೂಲಕ ಶೋಷಣೆಗಳಿಗೆ ಮಹಿಳೆಯರು ನ್ಯಾಯ ಪಡೆಯಬಹುದಾಗಿದೆ ಎಂದು ಬಂಟ್ವಾಳ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಇಮ್ತಿಯಾಜ್ ಅಹಮ್ಮದ್ ಹೇಳಿದರು.


ಸೋಮವಾರ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅಧಿವಕ್ತಾ ಪರಿಷತ್ ವತಿಯಿಂದ ನಡೆದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿದರು.

ಜಾಹೀರಾತು

ಸಂಪನ್ಮೂಲ ವ್ಯಕ್ತಿ ವಿದ್ಯಾಲತಾ ಅವರು ಮಹಿಳಾ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಮಹಿಳಾ ಸಬಲೀಕರಣದ ಕುರಿತು ಶೋಭಲತಾ ಸುವರ್ಣ ಉಪನ್ಯಾಸ ನೀಡಿದರು.

ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್‌ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ, ಸಿವಿಲ್ ನ್ಯಾಯಾಧೀಶೆ ರಮ್ಯಾ ಎಚ್.ಆರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಜಿ.ತಿಮ್ಮಾಪುರ್, ಜಿಲ್ಲಾ ಕಾನೂನು ಸೇವೆಗಳ ಸಮಿತಿ ಸದಸ್ಯ ಕೆ.ರಮೇಶ್ ಉಪಾಧ್ಯಾಯ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಽಕಾರಿ ಗಾಯತ್ರಿ, ವಕೀಲರ ಸಂಘದ ಜತೆ ಕಾರ್ಯದರ್ಶಿ ವಿನೋದ ಎ.ಎಸ್, ಅಧಿವಕ್ತಾ ಪರಿಷತ್ ಉಪಾಧ್ಯಕ್ಷೆ ಉಮಾ ಎನ್.ಸೋಮಯಾಜಿ ಭಾಗವಹಿಸಿದ್ದರು. ಬಂಟ್ವಾಳ ಅಧಿವಕ್ತಾ ಪರಿಷತ್ ಗೌರವಾಧ್ಯಕ್ಷ ರಾಜಾರಾಮ್ ನಾಯಕ್ ಪ್ರಸ್ತಾವನೆಗೈದರು. ನ್ಯಾಯವಾದಿಗಳಾದ ಶೈಲಜಾ ರಾಜೇಶ್ ಸ್ವಾಗತಿಸಿ, ಅಕ್ಷತಾ ವಂದಿಸಿದರು. ದಕ್ಷಾ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ