ಬಂಟ್ವಾಳ

ಎ.ಸಿ. ಸೂಚನೆಯಂತೆ ಕಸ ವಿಲೇವಾರಿ – ಪ್ರತಿಭಟನೆಗೂ ತಯಾರಿ

ಕಂಚಿನಡ್ಕಪದವಿನಲ್ಲಿ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ನಡೆಸಲು ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಖಡಕ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭಾಡಳಿತ ಅದನ್ನು ಪಾಲಿಸುವ ಪ್ರಕ್ರಿಯೆಗೆ ಸಜ್ಜಾಗುತ್ತಿದೆ. ಈ ನಡುವೆ ತ್ಯಾಜ್ಯವನ್ನು ತರಲು ಬಿಡುವುದಿಲ್ಲ ಎಂದು ಹೇಳಿರುವ ಸಜಿಪನಡು ಗ್ರಾಮಸ್ಥರು ಅದನ್ನು ವಿರೋಧಿಸಲು ಸೋಮವಾರ ತಯಾರಾಗಿ ನಿಂತ ಘಟನೆಯೂ ನಡೆಯಿತು.

ಜಾಹೀರಾತು

ಸಹಾಯಕ ಕಮೀಷನರ್ ಸೂಚಿಸಿದಂತೆ ಎಲ್ಲ ತಯಾರಿಗಳನ್ನು ನಡೆಸಲಾಗುತ್ತಿದೆ. ಪುರಸಭೆಯ ಸೂಚಿತ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ನಡೆಸಲಾಗುತ್ತಿದ್ದು, ಇದು ಒಣಕಸದ ವಿಲೇವಾರಿಯಷ್ಟೇ. ಇದರಿಂದ ಯಾರಿಗೂ ತೊಂದರೆ ಆಗುವುದಿಲ್ಲ, ಈ ಕುರಿತು ಗ್ರಾಪಂಗೆ ಪುರಸಭೆ ಮಾಹಿತಿ ನೀಡಿದೆ.  ಈ ಮಧ್ಯೆ ಸೋಮವಾರ ಕಸದ ವಾಹನಗಳು ಸಜೀಪನಡುವಿಗೆ ತೆರಳಲಿಲ್ಲ.

ಇಲ್ಲಿನ‌ ಸಮಸ್ಯೆ ನಿವಾರಿಸದೆ ಪರಿಸರ ಇಲಾಖೆ ನಿಬಂಧನೆಗಳನ್ನು ಪಾಲಿಸದೆ ಇಲಾಖೆ ತ್ಯಾಜ್ಯವನ್ನು ಇಲ್ಲಿ ಹಾಕಲು ನಾವು ಬಿಡುವುದಿಲ್ಲ ಎಂದಿರುವ ಗ್ರಾಪಂ ಅಧ್ಯಕ್ಷ ಮಹಮ್ಮದ್ ನಾಸೀರ್, ಪ್ರಮುಖರಾದ ಅಬುಬಕ್ಕರ್ ಸಜಿಪ, ತ್ಯಾಜ್ಯ ತಂದು ಸುರಿದರೆ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದಾರೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ.

ಜಾಹೀರಾತು

ಸಹಾಯಕ ಕಮೀಷನರ್ ನೇತೃತ್ವದಲ್ಲಿ ಮಾ.14ರಂದು ನಡೆದ ಸಭೆ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ