ಬಂಟ್ವಾಳ

ತ್ಯಾಜ್ಯ ವಿಲೇವಾರಿ ವಿಚಾರ: ಸಜೀಪನಡುವಿನಲ್ಲಿ ಸರ್ವಪಕ್ಷಗಳ ಸಭೆ

  • ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ – ತೀರ್ಮಾನ

ಕಂಚಿನಡ್ಕಪದವು ಎಂಬಲ್ಲಿ ಬಂಟ್ವಾಳ ಪುರಸಭೆ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಸ್ಥಳಿಯ ಶಾಸಕರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪುರಸಭೆಯ ಮುಖ್ಯಾಧಿಕಾರಿಗಳ ಸಭೆಯನ್ನ ಕರೆಯಲು ಮಂಗಳವಾರ ಸಜಿಪನಡು ಗ್ರಾಪಂ ಕಚೇರಿಯಲ್ಲಿ ನಡೆದ ಸರ್ವಪಕ್ಷಗಳ ಸಭೆ ತೀರ್ಮಾನಿಸಿದೆ.

ಜಾಹೀರಾತು

ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ನಾಸೀರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾದ ಸುನೀತಾ ಶಾಂತಿ ಮೊರಾಸ್, ಷಣ್ಮುಖ ಸುಬ್ರಹ್ಮಣ್ಯ ದೇವಾಸ್ಥನದ ಆಡಳಿತ ಮುಖ್ಯಸ್ಥರಾದ ವೆಂಕಟೇಶ್ವರ ಭಟ್ ಮುಳ್ಳಿಂಜ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ ದೇರಾಜೆ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಅಬೂಬಕ್ಕರ್, ಎಸ್.ಡಿ.ಪಿ.ಐ ಗ್ರಾಮ ಸಮಿತಿ ಅಧ್ಯಕ್ಷರಾದ ನವಾಝ್, ಹಾಗೂ ವಿವಿಧ ಪಕ್ಷದ ಮುಖಂಡರು, ಗ್ರಾಪಂ ಸದಸ್ಯರು ಭಾಗವಹಿಸಿದ್ದರು.ಈ ವೇಳೆ ಕಂಚಿನಡ್ಕಪದವಿನಲ್ಲಿ ತ್ಯಾಜ್ಯ ವಿಲೇವಾರಿ ಬಗ್ಗೆ ಇತ್ತೀಚೆಗೆ ಆಗಿರುವ ಬೆಳವಣಿಗೆಯನ್ನು ಸಭೆಯಲ್ಲಿ ಖಂಡಿಸಲಾಯಿತು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.