ಕೋವಿಡ್ -19 ವಿರುದ್ಧ ಸಮರ: ದ.ಕ.ದಲ್ಲಿ ನಿಷೇಧಾಜ್ಞೆ ಕಟ್ಟುನಿಟ್ಟು, ಹೊಸ ನಿರ್ಬಂಧ ಜಾರಿ

  • ಸಾರ್ವಜನಿಕರು ಮುಕ್ತವಾಗಿ ಬೆರೆಯುವುದಕ್ಕೆ ತಡೆ, ಏನೇನಿದೆ ಸೂಚನೆ ಇಲ್ಲಿದೆ ನೋಡಿ..

ದ.ಕ. ಜಿಲ್ಲೆಯ ನೆರೆಯ ರಾಜ್ಯ, ಜಿಲ್ಲೆಗಳಲ್ಲಿ ಕೋವಿಡ್ 19 (ಕೊರೊನಾ ವೈರಾಣು ಕಾಯಿಲೆ 2019)ಯ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನೆರೆ ರಾಜ್ಯ/ಜಿಲ್ಲೆಗಳಿಂದ ದ.ಕ.ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದ ವ್ಯಕ್ತಿಯಿಂದ ವ್ಯಕ್ತಿಗೆ ಈ ಸಾಂಕ್ರಾಮಿಕ ರೋಗವು ಹರಡುವ ಸಾಧ್ಯತೆ ಇದೆ. ದ.ಕ.ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಸೋಮವಾರ ರಾತ್ರಿ ಹೊರಡಿಸಿದ ತುರ್ತು ಪ್ರಕಟಣೆಯಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬೆರೆಯುವುದನ್ನು ಅನಿವಾರ್ಯವಾಗಿ ತಡೆಯಬೇಕಾದ ಅವಶ್ಯಕತೆ ಇದೆ ಎಂದು ಹೇಳಿರುವ ಅವರು, 22ರ ರಾತ್ರಿ 9ರಿಂದ ಹೊರಡಿಸಿದ ನಿಷೇಧಾಜ್ಞೆಗೆ ಹೆಚ್ಚುವರಿ ನಿರ್ಬಂಧಗಳನ್ನು ಜಾರಿಗೊಳಿಸಿದ್ದಾರೆ.

ಜಾಹೀರಾತು

ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಹೆಚ್ಚುವರಿ ನಿರ್ಬಂಧಗಳು ಹೀಗಿದೆ:

  1. ಅವಶ್ಯಕ ಸೇವೆಗಳಾದ ಆಹಾರ, ಪಡಿತರ ಅಂಗಡಿ, ಹಾಲು, ತರಕಾರಿ, ದಿನಸಿ, ಮಾಂಸ, ಮೀನು, ಹಣ್ಣಿನ ಮಾರುಕಟ್ಟೆ, ಸಗಟು ಮತ್ತು ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ಮಾತ್ರ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ತೆರೆಯಲು ಅವಕಾಶ ಇರುತ್ತದೆ.
  2. ಎಲ್ಲ ಕ್ಯಾಬ್ ಗಳು, ಆಟೊ ರಿಕ್ಷಾಗಳು, ಬಾಡಿಗೆ ವಾಹನ ಸೇವೆಗಳನ್ನು ಪ್ರಯಾಣಿಕರ ಸೇವೆಗೆ ಬಳಸತಕ್ಕದ್ದಲ್ಲ. ಕೇವಲ ತುರ್ತು ಪರಿಸ್ಥಿತಿ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ಬಳಸಲು ಅವಕಾಶ ನೀಡಲಾಗಿದೆ.
  3. ಅವಶ್ಯಕ ಸೇವೆಗಳು ಮತ್ತು ವಸ್ತುಗಳು, ಆಹಾರ, ವೈದ್ಯಕೀಯ ಉಪಕರಣಗಳು, ಔಷಧ, ಇಂಧನ, ಕೃಷಿಯುತ್ಪನ್ನಗಳ ಕಾರ್ಖಾನೆಗಳನ್ನು ಹೊರತುಪಡಿಸಿ, ಉಳಿದ ಕೈಗಾರಿಕೆ/ಕಾರ್ಖಾನೆಗಳ ಕಾರ್ಯಾಚರಣೆ ಸ್ಥಗಿತಗೊಳಿಸತಕ್ಕದ್ದು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೋವಿಡ್ -19 ವಿರುದ್ಧ ಸಮರ: ದ.ಕ.ದಲ್ಲಿ ನಿಷೇಧಾಜ್ಞೆ ಕಟ್ಟುನಿಟ್ಟು, ಹೊಸ ನಿರ್ಬಂಧ ಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*