ಲಾಕ್ ಡೌನ್ ಸ್ಥಿತಿಯಲ್ಲಿರಬೇಕಾದ ದೇಶದ ಜನಸಾಮಾನ್ಯರ ನೆರವಿಗೆ ಕೇಂದ್ರ ಸರಕಾರ ನೂತನ ಪಡಿತರ ಯೋಜನೆಯೊಂದನ್ನು ಜಾರಿಗೊಳಿಸಿದ್ದು, ಯೋಜನೆಯನ್ವಯ 80 ಕೋಟಿ ಪಡಿತರದಾರರಿಗೆ ಪ್ರತೀ ಕೆ.ಜಿ.ಗೆ 2 ರೂ. ದರದಲ್ಲಿ ಗೋಧಿ ಹಾಗೂ ಪ್ರತೀ ಕೆ.ಜಿ.ಗೆ 3 ರೂ. ದರದಲ್ಲಿ ಅಕ್ಕಿಯನ್ನು ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ.
ಜಾಹೀರಾತು
ದೆಹಲಿಯಲ್ಲಿ ಸಚಿವ ಪ್ರಕಾಶ್ ಜಾವಡೇಕರ್ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದ್ದಾರೆ
ಕಟ್ಟಡ ಕಾರ್ಮಿಕರಿಗೆ ಉಚಿತ ಊಟ, ಮೂರು ತಿಂಗಳ ಪಡಿತರವನ್ನು ಮುಂಗಡವಾಗಿಯೇ ನೀಡಲಾಗುವುದು, ಗುತ್ತಿಗೆ ಕಾರ್ಮಿಕರಿಗೆ ಕಡ್ಡಾಯ ವೇತನ, ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ 1340 ಕೋಟಿ ರೂಪಾಯಿಗಳ ನಿಧಿ ಬಿಡುಗಡೆ ನೀಡುವ ಕುರಿತು ಅವರು ಪ್ರಕಟಿಸಿದ್ದಾರೆ. ವೈದ್ಯರು, ಪತ್ರಕರ್ತರು ಮತ್ತು ಇ ಕಾಮರ್ಸ್ ಸಿಬ್ಬಂದಿಗಳ ಕಾರ್ಯಕ್ಕೆ ತಡೆ ಬೇಡ ಎಂದು ಹೇಳಿರುವ ಸಚಿವ ಜಾವಡೇಕರ್ ಅವರು, ಕೊರೋನಾ ವೈರಸ್ ನಿಯಂತ್ರಣದ ಈ ಹೋರಾಟದಲ್ಲಿ ಇವರ ಸೇವೆ ಶ್ಲಾಘನೀಯ ಎಂದು ಹೇಳಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಲಾಕ್ ಡೌನ್: ಪಡಿತರದಾರರಿಗೆ ಕೇಂದ್ರದಿಂದ ಹಲವು ನೆರವು – ಅಕ್ಕಿ ಕೆ.ಜಿಗೆ 3 ರೂ, ಗೋಧಿ ಕೆ.ಜಿ.ಗೆ 2 ರೂ."
Be the first to comment on "ಲಾಕ್ ಡೌನ್: ಪಡಿತರದಾರರಿಗೆ ಕೇಂದ್ರದಿಂದ ಹಲವು ನೆರವು – ಅಕ್ಕಿ ಕೆ.ಜಿಗೆ 3 ರೂ, ಗೋಧಿ ಕೆ.ಜಿ.ಗೆ 2 ರೂ."