ಬಂಟ್ವಾಳ

ಅಕ್ಕಿಯ ಜತೆ ದಿನಸಿಯನ್ನೂ ಉಚಿತವಾಗಿ ನೀಡಿ: ರಮಾನಾಥ ರೈ ಒತ್ತಾಯ

ಜಾಗತಿಕ ಕೋವಿಡ್ ವೈರಸ್ ಮಹಾ ಮಾರಿ ಖಾಯಿಲೆಯನ್ನು ಜನತೆ ಗಂಭೀರವಾಗಿ ಸ್ವಯಂಪ್ರೇರಿತರಾಗಿ ಜಾಗ್ರತೆ ವಹಿಸಬೇಕು. ಜತೆಗೆ ಸರಕಾರ ಬಡ ಜನತೆಗೆ ಅಕ್ಕಿಯ ಜತೆಗೆ ದಿನಸಿ ಸಾಮಾಗ್ರಿಗಳನ್ನೂ ಉಚಿತವಾಗಿ ವಿತರಿಸುವುದಕ್ಕೆ ಕ್ರಮವಹಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಒತ್ತಾಯಿಸಿದ್ದಾರೆ.

ಜಾಹೀರಾತು

ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಮಾಡಲಾಗಿದೆ. ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿ ಮಾಡುವಾಗ ಕೆಲವು ವಿನಾಯಿತಿಗಳನ್ನು ಘೋಷಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಈಗಾಗಲೇ ಉಚಿತ ಅಕ್ಕಿ ಒದಗಿಸುತ್ತಿರುವ ಜತೆಗೆ ದಿನಸಿ ಸಾಮಾಗ್ರಿಗಳಾದ ಉಪ್ಪು,ಹುಳಿ,ಮೆಣಸು, ಎಣ್ಣೆ,ತೆಂಗಿನಕಾಯಿಯನ್ನೂ ಆದ್ಯತೆಯ ಮೇರೆಗೆ ಉಚಿತವಾಗಿ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು.ಸಾರ್ವಜನಿಕರು ಸರಕಾರದ ಆದೇಶವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಕೊರೋನಾ ವೈರಸ್ ಜನರಿಂದ ಜನರಿಗೆ ಹರಡದಂತೆ ಎಚ್ಚರಿಕೆ ವಹಿಸಲು ಅವರು ವಿನಂತಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.