ಬಂಟ್ವಾಳ

ಅಕ್ಕಿಯ ಜತೆ ದಿನಸಿಯನ್ನೂ ಉಚಿತವಾಗಿ ನೀಡಿ: ರಮಾನಾಥ ರೈ ಒತ್ತಾಯ

ಜಾಗತಿಕ ಕೋವಿಡ್ ವೈರಸ್ ಮಹಾ ಮಾರಿ ಖಾಯಿಲೆಯನ್ನು ಜನತೆ ಗಂಭೀರವಾಗಿ ಸ್ವಯಂಪ್ರೇರಿತರಾಗಿ ಜಾಗ್ರತೆ ವಹಿಸಬೇಕು. ಜತೆಗೆ ಸರಕಾರ ಬಡ ಜನತೆಗೆ ಅಕ್ಕಿಯ ಜತೆಗೆ ದಿನಸಿ ಸಾಮಾಗ್ರಿಗಳನ್ನೂ ಉಚಿತವಾಗಿ ವಿತರಿಸುವುದಕ್ಕೆ ಕ್ರಮವಹಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಒತ್ತಾಯಿಸಿದ್ದಾರೆ.

ಜಾಹೀರಾತು

ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಮಾಡಲಾಗಿದೆ. ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿ ಮಾಡುವಾಗ ಕೆಲವು ವಿನಾಯಿತಿಗಳನ್ನು ಘೋಷಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಈಗಾಗಲೇ ಉಚಿತ ಅಕ್ಕಿ ಒದಗಿಸುತ್ತಿರುವ ಜತೆಗೆ ದಿನಸಿ ಸಾಮಾಗ್ರಿಗಳಾದ ಉಪ್ಪು,ಹುಳಿ,ಮೆಣಸು, ಎಣ್ಣೆ,ತೆಂಗಿನಕಾಯಿಯನ್ನೂ ಆದ್ಯತೆಯ ಮೇರೆಗೆ ಉಚಿತವಾಗಿ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು.ಸಾರ್ವಜನಿಕರು ಸರಕಾರದ ಆದೇಶವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಕೊರೋನಾ ವೈರಸ್ ಜನರಿಂದ ಜನರಿಗೆ ಹರಡದಂತೆ ಎಚ್ಚರಿಕೆ ವಹಿಸಲು ಅವರು ವಿನಂತಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ