ಶುಕ್ರವಾರ ರಾತ್ರಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದ.ಕ.ಜಿಲ್ಲೆಯಲ್ಲಿ ಒಟ್ಟು 7 ಅದರಲ್ಲೂ ಶುಕ್ರವಾರ 2 ಪ್ರಕರಣಗಳು ಕೋವಿಡ್ 19 ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶನಿವಾರ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.
ಶನಿವಾರ ದ.ಕ. ಜಿಲ್ಲೆಯಲ್ಲಿ ಎಲ್ಲ ವಾಣಿಜ್ಯ ಚಟುವಟಿಕೆ, ವಾಣಿಜ್ಯ ವ್ಯವಹಾರಗಳು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಯಾವುದೇ ವಾಣಿಜ್ಯ ವ್ಯವಹಾರ ಇರುವುದಿಲ್ಲ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಪಾಸಿಟಿವ್ ಪ್ರಕರಣ ಏರಿಕೆ ಆಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದೇ ಇದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿ ಆಗಲಿವೆ. ಜನರ ಉತ್ತಮ ಭವಿಷ್ಯಕ್ಕಾಗಿ ತೆಗೆದುಕೊಳ್ಳುವ ಹಾಗೂ ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
www.bantwalnews.com Editor: Harish Mambady
STAY HOME STAY SAFE
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…