ನಿಷೇಧಾಜ್ಞೆ ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ: ಸಹಾಯಕ ಆಯುಕ್ತ, ತಹಸೀಲ್ದಾರ್ ಗೆ ಅಧಿಕಾರ

ನಿಷೇಧಾಜ್ಞೆಯಲ್ಲಿ ಸೂಚಿಸಲಾದ ಆದೇಶಗಳನ್ನು ದ.ಕ.ಜಿಲ್ಲೆಯ ಸಾರ್ವಜನಿಕರು ಉಲ್ಲಂಘಿಸುತ್ತಿರುವ ಪ್ರಕರಣಗಳು ವರದಿಯಾಗಿದ್ದು, ಇಂಥ ಪ್ರಕರಣ ನಿಯಂತ್ರಿಸಲು ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಅಧಿಕಾರವನ್ನು ಜಿಲ್ಲೆಯ ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ನೀಡಿದ್ದಾರೆ.

ಬಿ.ಸಿ.ರೋಡ್ ನೋಟ

ದ.ಕ.ಜಿಲ್ಲೆಯ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರು ಮುಕ್ತವಾಗಿ ಬೆರೆಯುವುದನ್ನು ತಡೆಗಟ್ಟುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಹೇಳಿದೆ. ಬಂಟ್ವಾಳ ತಾಲೂಕಿನಲ್ಲಿ ಸಾರ್ವಜನಿಕರು ಸೂಚಿತ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದು, ಕೊರೊನಾ ಜಾಗೃತಿಗಾಗಿ ನಿರ್ಬಂಧದ ಮೊದಲ ನಿಯಮವಾದ ಮನೆಯಲ್ಲೇ ಇರಿ, ಮನೆಯಿಂದ ಹೊರಗೆ ಬರಬೇಡಿ ಎಂಬುದನ್ನು ಕಡ್ಡಾಯವಾಗಿ ಪಾಲಿಸಿ, ಅನಾವಶ್ಯಕವಾಗಿ ಗುಂಪು ಸೇರುವುದು, ವಾಹನಗಳಲ್ಲಿ ಸಂಚರಿಸುವುದು, ತಿರುಗಾಡುವುದನ್ನು ಕಂಡುಬಂದರೆ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅವರು ಎಚ್ಚರಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಿಷೇಧಾಜ್ಞೆ ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ: ಸಹಾಯಕ ಆಯುಕ್ತ, ತಹಸೀಲ್ದಾರ್ ಗೆ ಅಧಿಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*