ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯ ನಡುವೆಯೂ ಬೆಳಗಿನ ಅವಧಿಯಲ್ಲಿ ನೀಡಲಾಗುತ್ತಿದ್ದ ಖರೀದಿಗೆ ಅವಕಾಶವನ್ನು ಹಿಂಪಡೆದು, ಕಳೆದ ಶನಿವಾರ, ಭಾನುವಾರ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್ ನಡೆಸಲಾಗಿತ್ತು. ಅದು ಸೋಮವಾರಕ್ಕೂ ಮುಂದುವರೆಯಲಿದೆ. ಹೀಗೆಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಇದ್ದರು.
ಆದರೆ ಮಂಗಳವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 3ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗುವುದು. ಈ ವೇಳೆ ಕುಟುಂಬದ ಸದಸ್ಯನೊಬ್ಬನಷ್ಟೇ ಸಾಮಾಗ್ರಿ ಖರೀದಿಗೆ ಹೊರಗೆ ಬರಬೇಕು. ದಿನಸಿ ಅಂಗಡಿಯವರು ಅಧಿಕ ದರ ವಸೂಲಿ ಮಾಡಿದರೆ, ಪರವಾನಗಿ ರದ್ದುಗೊಳಿಸಲಾಗುತ್ತದೆ ಎಂದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…