ಬಂಟ್ವಾಳ ಪುರಸಭೆ ಮತ್ತು ಅಗ್ನಿಶಾಮಕದಳ ಸಹಕಾರದೊಂದಿಗೆ ಕ್ರಿಮಿನಾಶಕ ದ್ರಾವಣ ಸಿಂಪಡಣಾ ಕಾರ್ಯ ಸೋಮವಾರ ಬೆಳಗ್ಗೆ ಬಿ.ಸಿ.ರೋಡಿನ ವಿವಿಧ ಭಾಗಗಳಲ್ಲಿ ನಡೆಯಿತು.
ಬಿ.ಸಿ.ರೋಡಿನ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕೈಕಂಬ ದ್ವಾರದ ಬಳಿ ಕಟ್ಟಡಗಳು, ಆರೋಗ್ಯ ಕೇಂದ್ರಗಳಲ್ಲಿ ಸಿಂಪಡಣೆ ನಡೆಯಿತು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಸೂಚನೆಯಂತೆ ಪುರಸಭೆಯ ಪರಿಸರ ಸಹಾಯಕ ಇಕ್ಬಾಲ್, ಅಗ್ನಿಶಾಮಕದಳದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಪ್ರಮುಖ ಅಗ್ನಿಶಾಮಕ ಜಯ, ಚಾಲಕ ರಾಜೇಶ್ ಶೆಟ್ಟಿ, ಅಗ್ನಿಶಾಮಕ ಪ್ರಸಾದ್, ಸುರೇಂದ್ರ ಕಾರ್ಯಾಚರಣೆ ನಡೆಸಿದರು.
www.bantwalnews.com Editor: Harish Mambady 9448548127