ಬಂಟ್ವಾಳ

ಅಗತ್ಯ ವಸ್ತುಗಳಿಗೆ ನಿಗದಿತ ದರಕ್ಕಿಂತ ಅಧಿಕ ವಸೂಲಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಕೋಟ ಎಚ್ಚರಿಕೆ

ಅಗತ್ಯ ವಸ್ತುಗಳಿಗೆ ನಿಗದಿತ ದರಕ್ಕಿಂತ ಅಧಿಕ ವಸೂಲು ಮಾಡಿದರೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಪರವಾನಗಿ ಪಡೆದೂ ದಾಸ್ತಾನು ಇಟ್ಟವರು ಅಂಗಡಿಯನ್ನು ಮಾ.31ರಂದು ಬೆಳಗ್ಗೆ  6ರಿಂದ ಮಧ್ಯಾಹ್ನ 3ರವರೆಗೆ ತೆರೆಯಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇನ್ನು ಸ್ಥಳೀಯಾಡಳಿತ ಮಟ್ಟದ ಟಾಸ್ಕ್ ಫೋರ್ಸ್ ಕೊರೋನಾ ಹಿನ್ನೆಲೆಯಲ್ಲಿ ಸಕ್ರಿಯವಾಗಿ ಕಾರ್ಯಾಚರಿಸಬೇಕು ಎಂದು ಸೂಚಿಸಿದ ಅವರು, ಬಿಸಿಯೂಟಕ್ಕಾಗಿ ಶಾಲೆಗಳಿಗೆ ಪೂರೈಕೆಯಾದ ಅಕ್ಕಿಯನ್ನು ಪ್ರತಿ ವಿದ್ಯಾರ್ಥಿಗೂ ವಿತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಶಿಕ್ಷಕರಿಗೆ ತೊಂದರೆ ಆಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿತರಣೆ ನಡೆಸಲಾಗುತ್ತದೆ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು

ಸಜೀಪನಡು ಗ್ರಾಮದಲ್ಲಿ ಯಾವುದೇ ಮೂಲಭೂತ ಅವಶ್ಯಕತೆಗಳಿಗೆ ತೊಂದರೆಯಾಗದಂತೆ ಸೂಚನೆ ನೀಡಲಾಗಿದ್ದು, ಕೊರೊನೋ ಸೋಂಕಿತ ಮಗು ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದರು. ಕೊರೊನೊ ಹಿನ್ನೆಲೆಯಲ್ಲಿ ಕೃಷಿ ಕಾರ್ಯಗಳಿಗೆ ಅಡ್ಡಿಯಾಗದು. ಕಟಾವು ಯಂತ್ರಗಳ ಸಾಗಾಟಕ್ಕೆ ಪಾಸ್ ನೀಡುವ ಕುರಿತು ಚರ್ಚಿಸಲಾಗಿದೆ ಎಂದವರು ಹೇಳಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ದ.ಕ.ಸಂಸದ ನಳಿನ್‌ಕುಮಾರ್ ಕಟೀಲು, ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.