ಬಂಟ್ವಾಳ

ನಾವು ಲಕ್ಷ್ಮಣರೇಖೆ ಹಾಕಿಕೊಂಡರೆ, ಕೊರೊನಾ ಹಿಮ್ಮೆಟ್ಟಿಸಲು ಸಾಧ್ಯ: ಶಾಸಕ ರಾಜೇಶ್ ನಾಯ್ಕ್

www.bantwalnews.com Editor: Harish Mambady

ಜಾಹೀರಾತು

ಕೊರೊನಾ ನಿಯಂತ್ರಣಕ್ಕೆ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಈಗಾಗಲೇ ತಾಲೂಕಾಡಳಿತ ಕ್ರಮ ಕೈಗೊಳ್ಳುತ್ತಿದ್ದು, ನಾವು ಲಕ್ಷ್ಮಣರೇಖೆ ಹಾಕಿಕೊಂಡರಷ್ಟೇ ಹಿಮ್ಮೆಟ್ಟಿಸಲು ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯ ಒಳಗೆ ಇರುವಂತಹ ಸಂದರ್ಭದಲ್ಲಿ ಮನಸ್ಸಿಗೆ ಕೆಲಸ ಕೊಡುವಂತಹ ವಿಚಾರಧಾರೆಗಳಲ್ಲಿ ತೊಡಗಿಸಿ, ಮನೆಮಂದಿಯೊಂದಿಗೆ ಸಂತಸದಿಂದ ಕಾಲಕಳೆಯುವಂತೆ ಸೂಚಿಸಿದರು. ಕೊರೊನಾ ನಿಯಂತ್ರಣಕ್ಕೆ ತಾಲೂಕಿನಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ , ಆರೋಗ್ಯ ಇಲಾಖೆಯ 345 ಕಾರ್ಯಕರ್ತೆಯರು ಸುಮಾರು 6000 ಮನೆ ಭೇಟಿಯ ಮೂಲಕ 65896 ಜನರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಿದ್ದಾರೆ ಎಂದರು. ಮಾರ್ಚ್ 31ರಂದು ಬೆಳಗ್ಗೆ ಆರರಿಂದ 3 ಗಂಟೆಯ ವರೆಗೆ ಜಿಲ್ಲಾಡಳಿತ ದಿನಸಿ ಅಂಗಡಿಗಳ ತೆರೆಯುವಿಕೆಗೆ ಅವಕಾಶವನ್ನು ನೀಡಿದ್ದು ಸಂದರ್ಭದಲ್ಲಿ ಎಲ್ಲ ನಾಗರಿಕರು ಸಂಯಮದಿಂದ ವರ್ತಿಸಿ ಸಾಮಾಜಿಕ ಅಂತರವನ್ನು ಕೊಳ್ಳುವುದರ ಮೂಲಕ ಕೊರೋನ ವೈರಸ್ ಹರಡದಂತೆ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ಅವರು ಮನವಿ ಮಾಡಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.