ಬಂಟ್ವಾಳ

ನಾವು ಲಕ್ಷ್ಮಣರೇಖೆ ಹಾಕಿಕೊಂಡರೆ, ಕೊರೊನಾ ಹಿಮ್ಮೆಟ್ಟಿಸಲು ಸಾಧ್ಯ: ಶಾಸಕ ರಾಜೇಶ್ ನಾಯ್ಕ್

www.bantwalnews.com Editor: Harish Mambady

ಜಾಹೀರಾತು

ಕೊರೊನಾ ನಿಯಂತ್ರಣಕ್ಕೆ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಈಗಾಗಲೇ ತಾಲೂಕಾಡಳಿತ ಕ್ರಮ ಕೈಗೊಳ್ಳುತ್ತಿದ್ದು, ನಾವು ಲಕ್ಷ್ಮಣರೇಖೆ ಹಾಕಿಕೊಂಡರಷ್ಟೇ ಹಿಮ್ಮೆಟ್ಟಿಸಲು ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯ ಒಳಗೆ ಇರುವಂತಹ ಸಂದರ್ಭದಲ್ಲಿ ಮನಸ್ಸಿಗೆ ಕೆಲಸ ಕೊಡುವಂತಹ ವಿಚಾರಧಾರೆಗಳಲ್ಲಿ ತೊಡಗಿಸಿ, ಮನೆಮಂದಿಯೊಂದಿಗೆ ಸಂತಸದಿಂದ ಕಾಲಕಳೆಯುವಂತೆ ಸೂಚಿಸಿದರು. ಕೊರೊನಾ ನಿಯಂತ್ರಣಕ್ಕೆ ತಾಲೂಕಿನಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ , ಆರೋಗ್ಯ ಇಲಾಖೆಯ 345 ಕಾರ್ಯಕರ್ತೆಯರು ಸುಮಾರು 6000 ಮನೆ ಭೇಟಿಯ ಮೂಲಕ 65896 ಜನರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಿದ್ದಾರೆ ಎಂದರು. ಮಾರ್ಚ್ 31ರಂದು ಬೆಳಗ್ಗೆ ಆರರಿಂದ 3 ಗಂಟೆಯ ವರೆಗೆ ಜಿಲ್ಲಾಡಳಿತ ದಿನಸಿ ಅಂಗಡಿಗಳ ತೆರೆಯುವಿಕೆಗೆ ಅವಕಾಶವನ್ನು ನೀಡಿದ್ದು ಸಂದರ್ಭದಲ್ಲಿ ಎಲ್ಲ ನಾಗರಿಕರು ಸಂಯಮದಿಂದ ವರ್ತಿಸಿ ಸಾಮಾಜಿಕ ಅಂತರವನ್ನು ಕೊಳ್ಳುವುದರ ಮೂಲಕ ಕೊರೋನ ವೈರಸ್ ಹರಡದಂತೆ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ಅವರು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ