ಪ್ರಮುಖ ಸುದ್ದಿಗಳು

ದಕ್ಷಿಣ ಕನ್ನಡ – ಕೋವಿಡ್ 19 ಮತ್ತೊಂದು ಪಾಸಿಟಿವ್ ಕೇಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾ.31ರಂದು ಬುಧವಾರ ಮತ್ತೊಂದು ಕೋವಿಡ್ 19 ಪಾಸಿಟಿವ್ ಕೇಸ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8ಕ್ಕೆ ಏರಿದಂತಾಗಿದೆ.

ಜಾಹೀರಾತು

ಗಂಟಲು ದ್ರವದ 9 ಸ್ಯಾಂಪಲ್ ಗಳಲ್ಲಿ 1 ಪಾಸಿಟಿವ್ ಪತ್ತೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪರೀಕ್ಷೆಗೆ 17 ಸ್ಯಾಂಪಲ್ ಗಳನ್ನು ಕಳಿಸಲಾಗಿದೆ. ಅವುಗಳಲ್ಲಿ 9ರ ವರದಿ ಬಂದಿದ್ದು, 8 ನೆಗೆಟಿವ್, ಒಂದು ಪಾಸಿಟಿವ್ ಬಂದಿದೆ. ಒಟ್ಟು 5 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಈವರೆಗೆ ಹೋಂ ಕ್ವಾರಂಟೈನ್ ನಲ್ಲಿ 5875 ಮಂದಿ ಇದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುಳ್ಯ ತಾಲೂಕು ಅಜ್ಜಾವರ ಗ್ರಾಮ ನಿವಾಸಿ ಅವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿರುವುದು ಬುಧವಾರ ತಿಳಿದುಬಂದಿದೆ. ಇವರು ಮಾ.18ರಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ದುಬೈನಿಂದ ಆಗಮಿಸಿದ್ದು, ತಪಾಸಣೆ ವೇಳೆಯಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಆ ಸಂದರ್ಭ ಮನೆಯಲ್ಲಿ ಕ್ವಾರಂಟೈನ್ ಆಗಲು ಸೂಚಿಸಲಾಗಿತ್ತು. ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ಸುಳ್ಯಕ್ಕೆ ಪ್ರಯಾಣಿಸಿ ಮನೆಯಲ್ಲೇ ಕ್ವಾರಂಟೈನ್ ಆಗಿರುತ್ತಾರೆ. ಮಾ.28ರಂದು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದು, 30ರಂದು ಅವರ ಗಂಟಲು ಮಾದರಿ ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. 31ರಂದು ವರದಿ ಸ್ವೀಕೃತವಾಗಿದ್ದು, ಸೋಂಕು ದೃಢಪಟ್ಟಿತು ಎಂದು ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ