ಹಸಿವು ನೀಗಿಸಲು ತುರ್ತು ಕ್ರಮ ಅಗತ್ಯ, ಕೇರಳದಂತೆ ಉಚಿತ ಪಡಿತರ ವಿತರಿಸಿ: ರಮಾನಾಥ ರೈ

  • ಬಡವರು ಹಸಿವಿನಿಂದ ಸಾಯುವ ಪರಿಸ್ಥಿತಿ ನಿರ್ಮಾಣವಾಗಬಾರದು

ಲಾಕ್ ಡೌನ್ ಪಾಲನೆ ಸಂದರ್ಭ ಬಡವರು ಹಸಿವಿನಿಂದ ಸಾಯುವ ಪರಿಸ್ಥಿತಿ ನಿರ್ಮಾಣವಾಗಬಾರದು. ಕೇರಳದಲ್ಲಿ ಅಂಗನವಾಡಿ ಮೂಲಕ ಬಡವರಿಗೆ ಧರ್ಮಾರ್ಥ ನಿತ್ಯ ಪಡಿತರ ವಿತರಿಸುವಂತೆ ದ.ಕ.ಜಿಲ್ಲೆಯಲ್ಲೂ ಕ್ರಮ ಕೈಗೊಳ್ಳುವುದು ತುರ್ತು ಅಗತ್ಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನಲ್ಲಿ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಂಗಳವಾರ ಮಾತನಾಡಿ, ಇಂದು ಕೊರೊನಾ ಜಾಗತಿಕವಾಗಿ ವ್ಯಾಪಿಸಿದ್ದು, ನಿಗ್ರಹಕ್ಕೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳಿಗೆ ನಮ್ಮ ಸಹಕಾರ ಇದೆ ಎಂದ‌ ಅವರು,  ಅಕ್ಕಿಯ ಜೊತೆಗೆ ಎಲ್ಲಾ ದಿನಬಳಕೆಯ ವಸ್ತುಗಳನ್ನು ಉಚಿತವಾಗಿ ಸರಕಾರ ಬಡವರ ಪ್ರತಿ ಮನೆಗೂ ಪಡಿತರ ವ್ಯವಸ್ಥೆ ಕಲ್ಪಿಸುವ  ಕಾರ್ಯ ಶೀಘ್ರ ನಡೆಯಬೇಕು ಎಂದರು. ಗ್ರಾಮ ಪಂಚಾಯಿತಿಗಳನ್ನು ಕೇಂದ್ರೀಕರಿಸಿಕೊಂಡು ಜನರಿಗೆ ನೆರವಾಗಬೇಕು ಎಂದು ಸಲಹೆ ನೀಡಿದ ಅವರು, ಅತಿಥಿ ಕಾರ್ಮಿಕರಿಗೆ ಪಂಚಾಯಿತಿಯಲ್ಲಿ ಗಂಜಿಕೇಂದ್ರ ತೆರೆಯುವಂತೆ ಒತ್ತಾಯಿಸಿದರು.

ಮಂಗಳವಾರ ದಿನಸಿ ಸಾಮಾಗ್ರಿ ಖರೀದಿಗೆ ಅವಕಾಶ ‌ನೀಡಲಾದ ಸಂದರ್ಭ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕಾರ್ಯ‌ ನಿರೀಕ್ಷೆಯಂತೆ ನಡೆದಿಲ್ಲ, ಈ ಹಿನ್ನೆಲೆಯಲ್ಲಿ ಜನರ ಮನೆಗೇ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದವರು ತಿಳಿಸಿದರು. ಪುರಸಭಾ ವ್ಯಾಪ್ತಿಯಲ್ಲೂ ಕಾರ್ಯಪಡೆ ರಚನೆ ಆಗಿಲ್ಲ ಎಂಬ ಮಾಹಿತಿ ಬಂದಿದ್ದು, ಸರ್ಕಾರದ ಸುತ್ತೋಲೆಗೆ ಅವರು ಕಾಯಬೇಕಾಗಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯ ಲುಕ್ಮಾನ್ ಉಪಸ್ಥಿತರಿದ್ದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹಸಿವು ನೀಗಿಸಲು ತುರ್ತು ಕ್ರಮ ಅಗತ್ಯ, ಕೇರಳದಂತೆ ಉಚಿತ ಪಡಿತರ ವಿತರಿಸಿ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*